HEALTH TIPS

ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಅನಂತಕೃಷ್ಣ ನಿಧನ

       ಮಂಗಳೂರು: ಮಂಗಳೂರು ಮೂಲದ  ಕರ್ಣಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಮತ್ತು ಸಿಇಒ ಅನಂತಕೃಷ್ಣ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಾವಧಿಯ ಅನಾರೋಗ್ಯದ ನಂತರ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

      ಅವರುಗೆ 74 ವರ್ಷ ವಯಸ್ಸಾಗಿತ್ತು.ಮೃತರಿಗೆ ಪತ್ನಿ ಮತ್ತು ಮಗ ಇದ್ದಾರೆ.

      ಬಂಟ್ವಾಳದವರಾದ ಅನಂತಕೃಷ್ಣ 1971 ರಲ್ಲಿ ಕರ್ಣಾಟಕ ಬ್ಯಾಂಕ್‌ಗೆ ಅಧಿಕಾರಿಯಾಗಿ ಸೇರಿದರು. ಅವರು ಕಾರ್ಯಾಚರಣೆ ಮತ್ತು ನಿರ್ವಹಣಾ ಮಟ್ಟದಲ್ಲಿ ವಿಭಿನ್ನ ಸಾಮರ್ಥ್ಯದ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ 2000 ನೇ ಇಸವಿಯಲ್ಲಿ ಅಧ್ಯಕ್ಷ ಮತ್ತು ಸಿಇಒ ಆಗಿ ನೇಮಕಗೊಂಡರು.

      ಅನಂತಕೃಷ್ಣ ಅವರು 2009 ರವರೆಗೆ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು.ಬಳಿಕ  ಅವರು ಬ್ಯಾಂಕಿನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಮುಂದುವರಿದು  2016 ರಲ್ಲಿ ನಿವೃತ್ತರಾದರು.

      ಕರ್ಣಾಟಕ ಬ್ಯಾಂಕ್ ಅವರ ನಾಯಕತ್ವದಲ್ಲಿ ತ್ವರಿತ ಪ್ರಗತಿ  ಕಂಡಿದ್ದು ಉತ್ತಮ ಬೆಳವಣಿಗೆಗೆ ಸಾಕ್ಷಿಯಾಗಿತ್ತು, ಅಲ್ಲದೆ ಕರ್ನಾಟಕದ ಹೊರಗೂ ಸಹ ತನ್ನ ಶಾಖೆಯನ್ನು ತೆರೆದಿತ್ತು.

     ಅನಂತಕೃಷ್ಣ ಅವರು ಇಂಡಿಯನ್ ಬ್ಯಾಂಕ್ ಅಸೋಸಿಯೇಶನ್‌ನ ಗೌರವ ಕಾರ್ಯದರ್ಶಿಯಾಗಿ ಮತ್ತು ಮಂಗಳೂರಿನ ಬ್ಯಾಂಕರ್ಸ್ ಕ್ಲಬ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries