HEALTH TIPS

ಕೊರೋನಾ ನಿಭಾಯಿಸುವಲ್ಲಿ ಮೋದಿ ಸರ್ಕಾರ ವಿಫಲ, ಲಾಹೋರ್‌ನಲ್ಲಿ ನಿಂತು ಗುಡುಗಿದ ಶಶಿ ತರೂರ್

      ನವದೆಹಲಿ: ಮಹಾಮಾರಿ ಕೊರೋನಾ ನಿಭಾಯಿಸುವಲ್ಲಿ ಭಾರತಕ್ಕಿಂತ ಪಾಕಿಸ್ತಾನ ಉತ್ತಮ ಸಾಧನೆ ಮಾಡಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಲಾಹೋರ್‌ನಲ್ಲಿ ನಿಂತ ಮೋದಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ. 

      ಕೋವಿಡ್ ನಿಭಾಯಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ಲಾಹೋರ್ ಸಾಹಿತ್ಯ ಉತ್ಸವದಲ್ಲಿ ಶಶಿ ತರೂರ್ ಹೇಳಿದ್ದಾರೆ. ಕೋವಿಡ್ 19 ಬಗ್ಗೆ ಈಗಲೇ ಗಂಭೀರವಾಗಿ ಯೋಚಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಆರ್ಥಿಕ ಕುಸಿತದ ದುರಂತವನ್ನು ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಈ ಹಿಂದೆಯೇ ಎಚ್ಚರಿಕೆ ನೀಡಿದ್ದರೂ ಮೋದಿ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.

     ಮೋದಿ ಸರ್ಕಾರವು ಮುಸ್ಲಿಂ ವಿರುದ್ಧದ ಧರ್ಮಾಂಧತೆ ಮತ್ತು ತಾರತಮ್ಯವನ್ನು ಸಮರ್ಥಿಸುವ ಸಲುವಾಗಿ ತಬ್ಲಿಘಿ ಜಮಾಅತ್ ಅನ್ನು ದೂಷಿಸುತ್ತಿದೆ ಎಂದು ತರೂರ್ ಆರೋಪಿಸಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries