HEALTH TIPS

ನಗ್ರೋಟಾ ಎನ್ಕೌಂಟರ್: ಪಾಕಿಸ್ತಾನ ರಾಯಭಾರಿಗೆ ಬುಲಾವ್, ಪ್ರಬಲ ಪ್ರತಿಭಟನೆ ವ್ಯಕ್ತಪಡಿಸಿದ ಭಾರತ

      ನವದೆಹಲಿ: ನಗ್ರೋಟಾದಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಘಟನೆಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿರುವ ಭಾರತ, ಪಾಕಿಸ್ತಾನ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಿದೆ ಎಂದು ಶನಿವಾರ ತಿಳಿದುಬಂದಿದೆ. 

      ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲಕ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಯೋಜಿಸಿರುವ ಭಯೋತ್ಪಾದಕ ದಾಳಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಪಾಕಿಸ್ತಾನ ಕೂಡಲೇ ತನ್ನ ನೆಲದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಗ್ರರಿಗೆ ಬೆಂಬಲನೀಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದೆ. 

     ಭಾರತ ಸರ್ಕಾರ ದೇಶದ ಭದ್ರತೆಯನ್ನು ಕಾಪಾಡಲು ಎಲ್ಲಾ ರೀತಿಯ ಅಗತ್ಯಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದೆ. ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆ ವೇಳೆ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ನಾಲ್ವರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಸಿಆರ್'ಪಿಎಫ್ ಯೋಧರು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಿದ್ದರು. 

       ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಜಮ್ಮು ನಗರದ ಹೊರವಲಯದ ಟೋಲ್ ಪ್ಲಾಜಾ ಬಳಿ ಪಾಕಿಸ್ತಾನದಿಂದ ಒಳನುಸುಳಿ ಬಂದಿದ್ದ ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಗುರುವಾರ ಭಾರೀ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ನಾಲ್ವರು ಉಗ್ರರನ್ನು ಭದ್ರತಾಪಡೆಗಳು ಹತ್ಯೆ ಮಾಡಿತ್ತು. ಘಟನೆಯಲ್ಲಿ ಇಬ್ಬರು ಪೆÇಲೀಸರು ಕೂಡ ಗಂಭೀರವಾಗಿ ಗಾಯಗೊಂಡಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries