ತಿದ್ದುಪಡಿಯನ್ನು ಹಿಂತೆಗೆದುಕೊಳ್ಳುವುದು ಎಡ ಪಕ್ಷ ನೇತಾರರಿಗೆ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ನಿಲ್ಲುವವರಿಗೆ ಆತಂಕದ ವಿಷಯವಾಗಿದೆ ಎಂದು ಮುಖ್ಯಮಂತ್ರಿಯ ಹೇಳಿಕೆ ಸ್ಪಷ್ಟಪಡಿಸಿದೆ.
ಸಿಎಂ ಹೇಳಿಕೆಯ ಪೂರ್ಣ ಪಠ್ಯ:
ನಾಗರಿಕರ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಸಾಂವಿಧಾನಿಕ ಘನತೆಯನ್ನು ಪ್ರಶ್ನಿಸುವ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಹೊರಗೆ ವ್ಯಾಪಕ ಪ್ರಚಾರವನ್ನು ತಡೆಯುವ ಪ್ರಯತ್ನವಾಗಿ ಕೇರಳ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮಾನಹಾನಿಕರ, ಸುಳ್ಳು ಮತ್ತು ಅಶ್ಲೀಲ ಪ್ರಚಾರದ ವಿರುದ್ಧ ಸಮಾಜದ ವಿವಿಧ ವರ್ಗಗಳಿಂದ ಟೀಕೆಗಳು ಮತ್ತು ದೂರುಗಳಿವೆ. ಮಹಿಳೆಯರು ಮತ್ತು ವಿಶೇಷ ಲಿಂಗಿಗಳ ಮೇಲೆ ಹಿಂಸಾತ್ಮಕ ದಾಳಿಗಳು ಸಮಾಜದಲ್ಲಿ ದೊಡ್ಡ ಪ್ರತಿಭಟನೆಗೆ ಕಾರಣವಾಗುತ್ತಿವೆ. ಕುಟುಂಬ ಸಂಬಂಧಗಳ ಮೇಲೆ ಪರಿಣಾಮ ಬೀರಿದ ಅನುಭವಗಳಿವೆ ಮತ್ತು ಹಲವು ಬಲಿಪಶುಗಳು ಈಗಾಗಲೆ ಆತ್ಮಹತ್ಯೆಗ್ಯೆದ ಉದಾಹರಣೆಗಳೂ ಇವೆ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಧ್ಯಮ ಮುಖ್ಯಸ್ಥರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿಯೇ ಪೊಲೀಸ್ ಕಾಯ್ದೆಯನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಲಾಯಿತು.
ತಿದ್ದುಪಡಿಯ ಘೋಷಣೆಯೊಂದಿಗೆ, ವಿವಿಧ ಭಾಗಗಳಿಂದ ವಿಭಿನ್ನ ಅಭಿಪ್ರಾಯಗಳು ಹುಟ್ಟಿಕೊಂಡವು. ಎಡ ಪಕ್ಷ ಬೆಂಬಲಿಗರು ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಿಂತವರು ಕಳವಳ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾನೂನನ್ನು ತಿದ್ದುಪಡಿ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂಬ ಉತ್ತರಗಳು ಸರ್ಕಾರದಿಂದ ವ್ಯಕ್ತವಾಯಿತು. ಈ ಬಗ್ಗೆ ವಿವರವಾದ ಚರ್ಚೆಗಳು ವಿಧಾನಸಭೆಯಲ್ಲಿ ನಡೆಯಲಿದ್ದು, ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಆಲಿಸಿದ ನಂತರ ಈ ಕುರಿತು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂಬ ಅಭಿಪ್ರಾಯ ಈಗಿನದು.




