ತಿರುವನಂತಪುರ: ಕೋವಿಡ್ ರೋಗಿಗಳಿಗೆ ಆಯುರ್ವೇದ ಚಿಕಿತ್ಸೆ ಪಡೆಯಲು ಅನುಮತಿ ನೀಡಲಾಗಿದೆ. ಯಾವುದೇ ಲಕ್ಷಣಗಳಿಲ್ಲದ ಮತ್ತು ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಆಯುರ್ವೇದ ಚಿಕಿತ್ಸೆಯನ್ನು ನೀಡಬಹುದು ಎಂದು ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದ ಆದೇಶ ಹೊರಡಿಸಲಾಗಿದೆ.
ರೋಗಿಗಳ ಒಪ್ಪಿಗೆಯೊಂದಿಗೆ ಮಾತ್ರ ಆಯುರ್ವೇದ ಚಿಕಿತ್ಸೆಯನ್ನು ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆಸಕ್ತರಿಗೆ ಆಯುರ್ವೇದ ಚಿಕಿತ್ಸೆ ನೀಡಬೇಕೆಂದು ಈ ಹಿಂದೆ ಕೇಂದ್ರ ಸೂಚಿಸಿತ್ತು. ಅಲೋಪತಿ ವೈದ್ಯರ ವಿರೋಧದಿಂದಾಗಿ ಈ ಶಿಫಾರಸನ್ನು ಇನ್ನೂ ಜಾರಿಗೆ ತರಲಾಗಿರಲಿಲ್ಲ.





