HEALTH TIPS

ರೈತ ಪ್ರತಿಭಟನೆ ಕುರಿತು ಕೆಲ ಮಾಧ್ಯಮಗಳ ವರದಿಗಾರಿಕೆಗೆ ಎಡಿಟರ್ಸ್ ಗಿಲ್ಡ್ ಕಳವಳ

       ಹೊಸದಿಲ್ಲಿ: ರಾಜಧಾನಿಯ ಗಡಿ ಪ್ರದೇಶಗಳಲ್ಲಿ ವಿವಿಧ ರಾಜ್ಯಗಳ ರೈತರು ಕೇಂದ್ರದ ಕೃಷಿ ಕಾಯಿದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗಳಿಗೆ ಚ್ಯುತಿ ಬರುವ ರೀತಿಯಲ್ಲಿ ಕೆಲ ಮಾಧ್ಯಮಗಳು ಪ್ರಕಟಿಸುತ್ತಿರುವ ವರದಿಗಳ ಕುರಿತಂತೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತನ್ನ ಕಳವಳ ವ್ಯಕ್ತಪಡಿಸಿದೆ.

           ``ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಯಾವುದೇ ಆಧಾರ ಅಥವಾ ಸಾಕ್ಷ್ಯಗಳಿಲ್ಲದೆ ಖಲಿಸ್ತಾನಿಗಳು ಹಾಗೂ ದೇಶವಿರೋಧಿಗಳು ಎಂಬ ಹಣೆಪಟ್ಟಿಯನ್ನು ಕಟ್ಟುವ ಕೆಲಸವನ್ನು ಕೆಲ ಮಾಧ್ಯಮಗಳು ಮಾಡುತ್ತಿವೆ,' ಎಂದು ಎಡಿಟರ್ಸ್ ಗಿಲ್ಡ್ ತನ್ನ ಹೇಳಿಕೆಯನ್ನು ಟ್ವಿಟ್ಟರ್‍ನಲ್ಲಿ ಪೋಸ್ಟ್ ಮಾಡಿದೆ.

``ಇಂತಹ ವರದಿಗಾರಿಕೆ ಜವಾಬ್ದಾರಿಯುತ ಹಾಗೂ ನೈತಿಕ ಪತ್ರಿಕೋದ್ಯಮದ ಮೌಲ್ಯಗಳ ವಿರುದ್ಧವಾಗಿದೆ,'' ಎಂದು ಹೇಳಿದ ಎಡಿಟರ್ಸ್ ಗಿಲ್ಡ್, ಪ್ರತಿಭಟನೆಗಳ ಕುರಿತಂತೆ ಸಮತೋಲಿತ ಹಾಗೂ ನ್ಯಾಯೋಚಿತ ವರದಿಗಾರಿಕೆ ನಡೆಸುವಂತೆ ಸಲಹೆ ನೀಡಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries