HEALTH TIPS

2020ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ

           ಚಾಮರಾಜನಗರ: ಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, 30 ಜಿಲ್ಲೆಗಳ ತಲಾ ಒಬ್ಬ ಜಾನಪದ ಕಲಾವಿದರು ಹಾಗೂ ಇಬ್ಬರನ್ನು ತಜ್ಞರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.

          ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಿನ್ನೆ  ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ. ಮಂಜಮ್ಮ ಜೋಗತಿ ಅವರು ಸುದ್ದಿಗೋಷ್ಠಿ ನಡೆಸಿ, ಕರ್ನಾಟಕ ಅಕಾಡೆಮಿಯ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ರಾಜ್ಯದ 30 ಜಿಲ್ಲೆಗಳ 30 ಹಿರಿಯ ಜಾನಪದ ಕಲಾವಿದರು ಹಾಗೂ ಇಬ್ಬರು ಜಾನಪದ ತಜ್ಞರನ್ನು ಆಯ್ಕೆ ಮಾಡಿರುವ ಪಟ್ಟಿ ಪ್ರಕಟಿಸಿದರು.

*ಬೆಂಗಳೂರು ಜಿಲ್ಲೆ ಎಂ.ಕೆ.ಸಿದ್ದರಾಜು-ಜಾನಪದ ಗಾಯನ,

* ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊನ್ನಗಂಗಮ್ಮ- ಸೋಬಾನೆಪದ,

* ರಾಮನಗರ ಜಿಲ್ಲೆ ತಿಮ್ಮಯ್ಯ-ತಮಟೆ ವಾದನ,

* ಕೋಲಾರ ಜಿಲ್ಲೆ ಕೆ.ಎನ್.ಚಂಗಪ್ಪ-ಭಜನೆ ತತ್ವಪದ,

* ಚಿಕ್ಕಬಳ್ಳಾಪುರ ಜಿಲ್ಲೆ ನಾರಾಯಣಪ್ಪ-ಕೀಲುಕುದುರೆ,

* ತುಮಕೂರು ಜಿಲ್ಲೆ ಸಿ.ವಿ.ವೀರಣ್ಣ-ವೀರಭದ್ರನ ಕುಣಿತ,

* ದಾವಣೆಗೆರೆ ಜಿಲ್ಲೆ ಭಾಗ್ಯಮ್ಮ-ಸೋಬಾನೆ ಹಾಡುಗಾರಿಕೆ,

* ಚಿತ್ರದುರ್ಗ ಜಿಲ್ಲೆ ಕೆಂಚಮ್ಮ-ಮದುವೆ ಹಾಡು,

* ಶಿವಮೊಗ್ಗ ಜಿಲ್ಲೆ ಕೆ.ಯುವರಾಜು-ಜಾನಪದ ಹಾಡುಗಾರಿಕೆ,

* ಮೈಸೂರು ಜಿಲ್ಲೆ ಕುಮಾರಸ್ವಾಮಿ-ಕಂಸಾಳೆಹಾಡುಗಾರಿಕೆ,

* ಮಂಡ್ಯ ಜಿಲ್ಲೆ ಭೂಮಿಗೌಡ-ಕೋಲಾಟ,

* ಹಾಸನ ಜಿಲ್ಲೆ ಗ್ಯಾರಂಟಿರಾಮಣ್ಣ-ಹಾಡುಗಾರಿಕೆ,

* ಚಿಕ್ಕಮಗಳೂರು ಜಿಲ್ಲೆ ಎಂ.ಸಿಭೋಗಪ್ಪ-ಚೌಡಿಕೆಪದ,

* ದಕ್ಷಿಣ ಕನ್ನಡ ಜಿಲ್ಲೆ ಗೋಪಾಲಕೃಷ್ಣ ಬಂಗೇರಾಮಧ್ವ-ಗೊಂಬೆಕುಣಿತ,

* ಉಡುಪಿ ಜಿಲ್ಲೆ ರಮೇಶ್ ಕಲ್ಮಾಡಿ-ಕರಗಕೋಲಾಟ,

* ಕೊಡಗು ಜಿಲ್ಲೆ ಕೆ.ಕೆ.ಪೊನ್ನಪ್ಪ-ಬೋಳೋಪಾಟ್,

* ಚಾಮರಾಜನಗರ ಜಿಲ್ಲೆ ಹೊನ್ನಮ್ಮ-ಸೋಬಾನೆಪದ,

* ಬೆಳಗಾವಿ ಜಿಲ್ಲೆ ಮುತ್ತಪ್ಪ ಅಲ್ಲಪ್ಪ ಸವದಿ-ತತ್ವಪದ,

* ಧಾರವಾಡ ಜಿಲ್ಲೆ ಮಲ್ಲೇಶಪ್ಪ ಫಕ್ಕೀರಪ್ಪತಡಸದ-ತತ್ವಪದ,

* ವಿಜಯಪುರ ಜಿಲ್ಲೆ ಸುರೇಶ ರಾಮಚಂದ್ರ ಜೋಶಿ-ಡೊಳ್ಳಿನಹಾಡುಗಾರಿಕೆ,

* ಬಾಗಲಕೋಟೆ ಜಿಲ್ಲೆ ಕೃಷ್ಣಪ್ಪ ಮಲ್ಲಪ್ಪ ಬೆಣ್ಣೂರ-ತತ್ವಪದ ಮತ್ತು ಭಜನೆ,

* ಉತ್ತರ ಕನ್ನಡ ಜಿಲ್ಲೆ ಸಹದೇವಪ್ಪ ಈರಪ್ಪ ನಡಗೇರಾ-ಲಾವಣಿಪದ,

* ಹಾವೇರಿ ಜಿಲ್ಲೆ ಬಸವರಾಜ ತಿರುಕಪ್ಪ ಶಿಗ್ಗಾಂವಿ-ತತ್ವಪದ,

* ಗದಗ ಜಿಲ್ಲೆ ಮುತ್ತಪ್ಪ ರೇವಣಪ್ಪ ರೋಣದ-ಪುರುವಂತಿಕೆ,

* ಕಲಬುರಗಿ ಜಿಲ್ಲೆ ಸಾಯಬಣ್ಣ-ಹಲಗೆವಾದನ,

* ಬೀದರ ಜಿಲ್ಲೆ ವೈಜಿನಾಥಯ್ಯ ಸಂಗಯ್ಯಸ್ವಾಮಿ-ಚಕ್ರಿಭಜನೆ,

* ರಾಯಚೂರು ಜಿಲ್ಲೆ ಜಂಬಣ್ಣ-ಹಗಲುವೇಷ,

* ಕೊಪ್ಪಳ ಜಿಲ್ಲೆ ತಿಪ್ಪಣ ಅಂಬಾಜಿ ಸುಗತೇಕರ -ಗೋಂದಲಿಗರು,

* ಬಳ್ಳಾರಿ ಜಿಲ್ಲೆ ಗೋಂದಳಿ ರಾಮಪ್ಪ-ಗೋಂದಳಿಪದ,

* ಯಾದಗಿರಿ ಜಿಲ್ಲೆ ಗೋಗಿ ಬಸವಲಿಂಗಮ್ಮ-ಮದುವೆ ಹಾಡು ಇವರು ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

           ವಾರ್ಷಿಕ ಗೌರವ ಜಾನಪದ ತಜ್ಞ ಪ್ರಶಸ್ತಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ. ಜಾನಪದ ತಜ್ಞರಾದ ದಕ್ಷಿಣ ಕನ್ನಡ ಜಿಲ್ಲೆಯ ಡಾ. ಗಾಯತ್ರಿ ನಾವಡ ಅವರು ಡಾ.ಜೀ.ಶಂ. ಪಶಸ್ತಿಗೆ ಮತ್ತು ಕಲಬುರಗಿ ಜಿಲ್ಲೆಯ ಬಸವರಾಜು ಸಬರದ ಅವರು ಡಾ.ಗದ್ದಗೀಮಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಜಾನಪದ ಕಲಾವಿದರಿಗೆ ತಲಾ 25 ಸಾವಿರ ರೂ. ಪ್ರಶಸ್ತಿ ಮೊತ್ತದ ಜೊತೆಗೆ ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ. ತಜ್ಞ ಪ್ರಶಸ್ತಿ ಪುರಸ್ಕೃತರಿಗೆ ತಲಾ 50 ಸಾವಿರ ರೂ. ಪ್ರಶಸ್ತಿ ಮೊತ್ತದ ಜೊತೆಗೆ ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ.ಮಂಜಮ್ಮ ಜೋಗತಿ ಅವರು ತಿಳಿಸಿದರು.

ಜಾನಪದ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಚಾಮರಾಜನಗರದಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ಆಯೋಜಿಸಲಾಗುವುದು. ಸಮಾರಂಭದ ದಿನಾಂಕ ನಿಗದಿಯಾಗಬೇಕಿದ್ದು, ಸಮಾರಂಭಕ್ಕೆ ಜಿಲ್ಲಾಡಳಿತದ ಸಹಕಾರ ಅಗತ್ಯವೆಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ.ಮಂಜಮ್ಮ ಜೋಗತಿ ಅವರುಮನವಿ ಮಾಡಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries