HEALTH TIPS

ನಿರಂತರ ವಿದ್ಯುತ್‌ ಪೂರೈಕೆ: ಹೊಸ ಯೋಜನೆ ಘೋಷಣೆ ಸಾಧ್ಯತೆ

         ನವದೆಹಲಿ: ದಿನದ 24 ಗಂಟೆಯೂ ವಿದ್ಯುತ್‌ ಪೂರೈಕೆ ಗುರಿಯನ್ನು ಸಾಧಿಸುವ ಸಲುವಾಗಿ ಹಾಗೂ ನಷ್ಟದಲ್ಲಿರುವ ವಿದ್ಯುತ್‌ ವಿತರಣಾ ಕಂಪನಿಗಳ (ಡಿಸ್‌ಕಾಂ) ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ಹೊಸ ಯೋಜನೆ ಘೋಷಿಸುವ ಸಾಧ್ಯತೆ ಎಂದು ಮೂಲಗಳು ಹೇಳಿವೆ.

         ಕೆಲವು ವಿದ್ಯುತ್‌ ವಿತರಣಾ ಕಂಪನಿಗಳು ನಷ್ಟದಲ್ಲಿದ್ದರೆ, ಇನ್ನೂ ಕೆಲವು ಕಂಪನಿಗಳು ಹಣಕಾಸು ಬಿಕ್ಕಟ್ಟನ್ನು ಎದುರಿಸುತ್ತಿವೆ. ಇವುಗಳ ಪುನಶ್ಚೇತನ ಅಗತ್ಯ. ಆ ಮೂಲಕ ನಿರಂತರ ವಿದ್ಯುತ್‌ ಪೂರೈಕೆಯನ್ನು ಸಾಧಿಸಲು ಈ ಬಾರಿಯ ಬಜೆಟ್‌ನಲ್ಲಿ ಪ್ಯಾಕೇಜ್‌ ಘೋಷಿಸುವ ಸಾಧ್ಯತೆ ಎಂದು ಇವೇ ಮೂಲಗಳು ಹೇಳಿವೆ.

      ಸಾಲದ ಸುಳಿಗೆ ಸಿಲುಕಿರುವ ಕಂಪನಿಗಳ ಪುನಶ್ಚೇತನಕ್ಕಾಗಿ 2015ರ ನವೆಂಬರ್‌ನಲ್ಲಿ 'ಉದಯ್‌' (ಉಜ್ವಲ್‌ ಡಿಸ್‌ಕಾಂ ಅಶ್ಯುರನ್ಸ್‌ ಯೋಜನಾ) ಹೆಸರಿನ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿತ್ತು.

ಸಾಲದಿಂದ ಮುಕ್ತವಾಗಿ, ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಕಂಪನಿಗಳಿಗೆ ಈ ಯೋಜನೆಯಡಿ ಅವಕಾಶ ನೀಡಲಾಗಿತ್ತು. ಇದಕ್ಕಾಗಿ, ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಬೇಕು. ಒಪ್ಪಂದವೇರ್ಪಟ್ಟ ಮೂರು ವರ್ಷಗಳ ಒಳಗಾಗಿ ಆರ್ಥಿಕವಾಗಿ ಸದೃಢವಾಗಬೇಕು ಎಂಬ ಷರತ್ತನ್ನು ಯೋಜನೆ ಒಳಗೊಂಡಿತ್ತು.

        ಎರಡನೇ ಹಂತದ 'ಉದಯ್‌' ಯೋಜನೆಗೆ (ಉದಯ್‌ 2.0) ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಆರ್‌.ಕೆ.ಸಿಂಗ್‌ ಅವರು 2019ರ ಸೆಪ್ಟೆಂಬರ್‌ನಲ್ಲಿ ಹೇಳಿದ್ದರು. ಹೀಗಾಗಿ, ನಾಳೆ (ಫೆ.1) ಮಂಡನೆಯಾಗುವ ಬಜೆಟ್‌ನಲ್ಲಿ ಈ ಯೋಜನೆಯನ್ನು ಘೋಷಿಸುವ ನಿರೀಕ್ಷೆ ಇದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries