HEALTH TIPS

ತಮಿಳುನಾಡಿನಲ್ಲಿ ಮತ್ತೆ ಪಟಾಕಿ ಕಾರ್ಖಾನೆ ಸ್ಫೋಟ; 5 ಸಾವು

         ವಿರುಧುನಗರ (ತಮಿಳುನಾಡು): ಜಿಲ್ಲೆಯ ಶಿವಕಾಶಿ ಬಳಿ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಐವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

          ಪಟಾಕಿ ತಯಾರಿಕೆಗಾಗಿ ಸಂಗ್ರಹಿಸಿದ್ದ 10ಕ್ಕೂ ಹೆಚ್ಚು ಶೆಡ್‌ಗಳು ಬೆಂಕಿಗೆ ಆಹುತಿಯಾಗಿದೆ.

ಕಳೆದೊಂದು ತಿಂಗಳಲ್ಲಿ ಈ ಪ್ರದೇಶದಲ್ಲಿ ಸಂಭವಿಸುತ್ತಿರುವ ಎರಡನೇ ದುರ್ಘಟನೆ ಇದಾಗಿದೆ. ಫೆಬ್ರುವರಿ 12ರಂದು ಸತ್ತೂರು ಬಳಿ ಅಚ್ಚಂಕುಲಂ ಘಟಕದಲ್ಲಿ ನಡೆದ ಪಟಾಕಿ ಸ್ಫೋಟದಲ್ಲಿ 20ಕ್ಕೂ ಹೆಚ್ಚು ಜನ ಕಾರ್ಮಿಕರು ಮೃತಪಟ್ಟು ಸುಮಾರು 30ರಷ್ಟು ಮಂದಿ ಗಾಯಗೊಂಡಿದ್ದರು.

                     : ತಮಿಳುನಾಡಿನ ಸತ್ತೂರಿನಲ್ಲಿ ಪಟಾಕಿ ಕಾರ್ಖಾನೆ ದುರಂತ

        ಈ ಬಾರಿ ಕಾಲಾಯರ್ ಕುರಿಚಿಯಲ್ಲಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಬೆಂಕಿ ನಂದಿಸಲು ನೆರವಾದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

         ಸ್ಫೋಟದ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

           ದೇಶದಲ್ಲಿ ಅತಿ ಹೆಚ್ಚು ಪಟಾಕಿಗಳನ್ನು ಶಿವಕಾಶಿಯಲ್ಲಿ ತಯಾರಿ ಮಾಡಲಾಗುತ್ತಿದೆ. ಆದರೆ ಪದೇ ಪದೇ ಅವಘಡ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries