HEALTH TIPS

ರೈತರ ಜತೆ ಅನೌಪಚಾರಿಕ ಮಾತುಕತೆ ಇಲ್ಲ: ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

        ನವದೆಹಲಿ: ಪ್ರತಿಭಟನಾ ನಿರತ ರೈತರ ಜತೆ ಅನೌಪಚಾರಿಕ ಮಾತುಕತೆ ನಡೆಸುವುದಿಲ್ಲ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

          ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿರುವುದು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿರುವುದು ಕಾನೂನು ಸುವ್ಯವಸ್ಥೆ ಕಾಪಾಡುವುದು, ಸ್ಥಳೀಯಾಡಳಿತಕ್ಕೆ ಸಂಬಂಧಿಸಿದ ವಿಚಾರ ಎಂದು ಅವರು ಹೇಳಿದ್ದಾರೆ.

       ಪ್ರತಿಭಟನಾ ನಿರತ 41 ರೈತ ಸಂಘಟನೆಗಳ ಜತೆ ಜನವರಿ 22ರಂದು ಕೇಂದ್ರವು ನಡೆಸಿದ 11ನೇ ಸುತ್ತಿನ ಮಾತುಕತೆ ವಿಫಲವಾಗಿತ್ತು. ಕೃಷಿ ಕಾಯ್ದೆಗಳನ್ನು 18 ತಿಂಗಳ ಕಾಲ ಅಮಾನತಿನಲ್ಲಿಡುವ ಸರ್ಕಾರದ ಪ್ರಸ್ತಾವವನ್ನು ಪರಿಗಣಿಸುವಂತೆ ರೈತ ಮುಖಂಡರಿಗೆ ಸರ್ಕಾರ ಸೂಚಿಸಿತ್ತು.

ಮುಂದಿನ ಸುತ್ತಿನ ಮಾತುಕತೆ ನಡೆಸಲಾಗುತ್ತದೆಯೇ, ಸರ್ಕಾರವು ಅನೌಪಚಾರಿಕವಾಗಿ ಮಾತುಕತೆ ನಡೆಸಲಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಸಚಿವರು 'ಇಲ್ಲ' ಎಂದು ಉತ್ತರಿಸಿದ್ದಾರೆ.

'ಔಪಚಾರಿಕ ಮಾತುಕತೆ ಯಾವಾಗ ನಡೆಯಲಿದೆ ಎಂಬ ಬಗ್ಗೆ ಮಾಹಿತಿ ನೀಡಲಿದ್ದೇವೆ' ಎಂದೂ ಸಚಿವರು ತಿಳಿಸಿದ್ದಾರೆ.

        ಪೊಲೀಸರು ಮತ್ತು ಆಡಳಿತವು ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲಿನ ದೌರ್ಜನ್ಯ ನಿಲ್ಲಿಸದೆ, ಬಂಧಿತ ರೈತ ನಾಯಕರ ಬಿಡುಗಡೆ ಮಾಡದೆ ಔಪಚಾರಿಕ ಮಾತುಕತೆ ನಡೆಸುವುದಿಲ್ಲ ಎಂಬ ರೈತ ಸಂಘಟನೆಗಳ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, 'ಈ ಕುರಿತು ಅವರು ಪೊಲೀಸ್ ಆಯುಕ್ತರ ಬಳಿ ಮಾತುಕತೆ ನಡೆಸಲಿ. ಕಾನೂನು ಸುವ್ಯವಸ್ಥೆ ಬಗ್ಗೆ ನಾನು ಪ್ರತಿಕ್ರಿಯಿಸಲಾರೆ. ಅದು ನನಗೆ ಸಂಬಂಧಿಸಿದ್ದಲ್ಲ' ಎಂದು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries