HEALTH TIPS

ಹೊಸ ಪ್ರಸ್ತಾಪದೊಂದಿಗೆ ಚರ್ಚೆಗೆ ಬನ್ನಿ: 'ಟ್ರ್ಯಾಕ್ಟರ್ ಕ್ರಾಂತಿ'ಗೆ ಕರೆ ನೀಡಿದ ರಾಕೇಶ್ ಟಿಕಾಯತ್

       ಗಾಜಿಯಾಬಾದ್: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡ ರಾಕೇಶ್ ಟಿಕಾಯತ್, ಕೇಂದ್ರ ಸರ್ಕಾರ ಹೊಸ ಪ್ರಸ್ತಾಪದೊಂದಿಗೆ ಚರ್ಚೆಗೆ ಬಂದರೆ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.

       ಗಾಜಿಪುರ ಗಡಿಯಲ್ಲಿ ಮಾತನಾಡಿದ ರಾಕೇಶ್ ಟಿಕಾಯತ್, ನಾವು ಸರ್ಕಾರದೊಂದಿಗೆ ಮತ್ತೆ ಚರ್ಚೆ ನಡೆಸಲು ಸಿದ್ಧರಿದ್ದೇವೆ. ಆದರೆ ಕೃಷಿ ಕಾನೂನುಗಳನ್ನು 12 ರಿಂದ 18 ತಿಂಗಳು ಅಮಾನತು ಮಾಡುವ ಸರ್ಕಾರದ ನಿರ್ಧಾರಕ್ಕೆ ನಮ್ಮ ಒಪ್ಪಿಗೆ ಇಲ್ಲ. ಅದನ್ನು ನಾವು ಒಪ್ಪುವುದೂ ಇಲ್ಲ. ಹೀಗಾಗಿ ಹೊಸ ಪ್ರಸ್ತಾಪದೊಂದಿಗೆ ಚರ್ಚೆಗೆ ಬನ್ನಿ ಎಂದು ಹೇಳಿದ್ದಾರೆ.

        ಕಳೆದ ಕೆಲ ತಿಂಗಳಿನಿಂದ ರೈತರು ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ರೈತರು ಹುತಾತ್ಮರಾಗಿದ್ದಾರೆ. ಅವರ ತ್ಯಾಗ ಮತ್ತು ಬಲಿದಾನ ವ್ಯರ್ಥವಾಗಲು ನಾವು ಬಿಡುವುದಿಲ್ಲ.  ಸರ್ಕಾರದ ಕೆಲ ಅಜೆಂಡಾಗಳು ರೈತರ ಹೋರಾಟವನ್ನು ಹಾದಿ ತಪ್ಪಿಸಿ ರೈತರ ಮುಷ್ಕರವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ರೈತರ ಹೋರಾಟವನ್ನು ಆಂತರಿಕ ವಿಚಾರ ಎಂದು ಹೇಳುವ ಮೂಲಕ ರೈತರ ಹೋರಾಟದ ಬಲ ಕುಂದಿಸುವ ಕೆಲಸ ಮಾಡುತ್ತಿದೆ. ಆದರೆ ಪ್ರಜಾಪ್ರಭುತ್ವದಲ್ಲಿ ಜನರೇ ನಿರ್ಣಾಯಕರು. ಸರ್ಕಾರವಲ್ಲ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅವಶ್ಯಕ ಎಂದು ಹೇಳಿದ್ದಾರೆ.

       ಟ್ರಾಕ್ಟರ್ ಕ್ರಾಂತಿಯಲ್ಲಿ ಪಾಲ್ಗೊಳ್ಳಿ:
      ಇದೇ ವೇಳೆ  ರೈತರ ಹೋರಾಟದ ಭಾಗವಾಗಿ ಟ್ರ್ಯಾಕ್ಟರ್ ಕ್ರಾಂತಿಯಲ್ಲಿ ಭಾಗವಹಿಸುವಂತೆ ದೇಶದಾದ್ಯಂತ ರೈತರಿಗೆ ರಾಕೇಶ್ ಟಿಕಾಯತ್ ಕರೆ ನೀಡಿದರು. 'ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ 10 ವರ್ಷಕ್ಕೂ ಹಳೆಯವಾದ ಟ್ರ್ಯಾಕ್ಟರ್ ಸೇರಿದಂತೆ ಡಿಸೇಲ್ ವಾಹನಗಳನ್ನು ನಿಷೇಧಿಸಿರುವುದನ್ನು ಖಂಡಿಸಿದರು.

      ಇತ್ತೀಚಿನವರೆಗೂ, ಯಾವ ವಾಹನಗಳು 10 ವರ್ಷ ಹಳೆಯದು ಎಂದವರು ಕೇಳಲಿಲ್ಲ. ಅವರ ಯೋಜನೆ ಏನು? 10 ವರ್ಷಕ್ಕೂ ಹಳೆಯದಾದ ಟ್ರ್ಯಾಕ್ಟರ್‌ಗಳನ್ನು ನಿಷೇಧಿಸಿ ಕಾರ್ಪೋರೇಟ್‌‍ಗಳಿಗೆ ಸಹಾಯ ಮಾಡಲು ಬಯಸುತ್ತಾರೆಯೇ? 10 ವರ್ಷಕ್ಕೂ ಹಳೆಯದಾದ ಟ್ರ್ಯಾಕ್ಟರ್‌ಗಳು ಸಹ ಓಡಾಡಲಿದ್ದು, ಹೊಸ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಅಂದೋಲನದಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲಿದೆ. ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ದೇಶದೆಲ್ಲೆಡೆಯ ಹೆಚ್ಚಿನ ಸಂಖ್ಯೆಯ ರೈತರು ಭಾಗವಹಿಸಲಿದ್ದಾರೆ. ಇತ್ತೀಚೆಗೆ 20,000 ಟ್ರ್ಯಾಕ್ಟರ್‌ಗಳು ದೆಹಲಿಯ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು. ಮುಂದಿನ ಗುರಿ 40 ಲಕ್ಷ ಟ್ರಾಕ್ಟರ್‌ಗಳಾಗಿವೆ ನಿಮ್ಮ ಟ್ರ್ಯಾಕ್ಟರ್‌ಗಳಲ್ಲಿ 'ಜನವರಿ 26 ಟ್ರ್ಯಾಕ್ಟರ್ ಕ್ರಾಂತಿ 2021' ಎಂದು ನಮೂದಿಸಿರಿ. ನೀವು ಎಲ್ಲಿಗೆ ಹೋದರೂ ನಿಮಗೆ ಗೌರವ ಸಿಗಲಿದೆ. ಮುಂದಿನ ಗುರಿ 40 ಲಕ್ಷ ಟ್ರ್ಯಾಕ್ಟರ್‌ಗಳಾಗಿವೆ  ಎಂದು ಹೇಳಿದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries