HEALTH TIPS

ಕೇರಳದಲ್ಲಿ ಚುನಾವಣೆ ನಡೆಯುವ ದಿನದಂದೇ ಸುಪ್ರೀಂ ಕೋರ್ಟ್‍ನಲ್ಲಿ ಲಾವಲಿನ್ ಪ್ರಕರಣ!

             

          ತಿರುವನಂತಪುರ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧದ ಲಾವಲಿನ್ ಪ್ರಕರಣವನ್ನು ಸುಪ್ರೀಂ ಕೋರ್ಟ್ ಪರಿಗಣಿಸುತ್ತಿರುವ ದಿನವೇ ಕೇರಳದಲ್ಲಿ ಮತದಾನ ನಡೆಯಲಿದೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಚಾರಣೆ ನಡೆಸಿದಾಗ ಏಪ್ರಿಲ್ 6 ಕ್ಕೆ ಮುಂದೂಡಿತ್ತು.  ಸಿಬಿಐ ವಾದಗಳನ್ನು ಪರಿಗಣಿಸಿ ಪ್ರಕರಣವನ್ನು ಮುಂದೂಡಲಾಯಿತು. 26 ನೇ ಬಾರಿಗೆ ಮುಂದೂಡಲಾಗಿರುವ ಈ ಪ್ರಕರಣವನ್ನು ಚುನಾವಣಾ ದಿನ ನ್ಯಾಯಾಲಯ ಪರಿಗಣಿಸುತ್ತಿರುವುದು ವಿಶೇಷವಾಗಿದೆ. 

          ಕೇರಳ ಚುನಾವಣೆಗೆ ಸಜ್ಜಾಗುತ್ತಿರುವಂತೆ ಸುಪ್ರೀಂ ಕೋರ್ಟ್‍ನ ಕ್ರಮ ರಾಜಕೀಯವಾಗಿ ನಿರ್ಣಾಯಕವಾಗಲಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಮಾಜಿ ಇಂಧನ ಕಾರ್ಯದರ್ಶಿ ಕೆ ಮೋಹನಚಂದ್ರನ್ ಮತ್ತು ಜಂಟಿ ಕಾರ್ಯದರ್ಶಿ ಎ ಫ್ರಾನ್ಸಿಸ್ ಅವರನ್ನು ಹೈಕೋರ್ಟ್ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಏಪ್ರಿಲ್ 6 ರಂದು ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ಈ ಪ್ರಕರಣವು ತುರ್ತು ಮಹತ್ವದ್ದಾಗಿದೆ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಬೊಟ್ಟುಮಾಡಿತ್ತು. 

        ಕೇರಳದಲ್ಲಿ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ. ಕುಂಞÁ ಲಿಕುಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ಮಲಪ್ಪುರಂ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಕೂಡ ಅದೇ ದಿನ ನಡೆಯಲಿದೆ. ಕೇರಳದ ಹೊರತಾಗಿ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇಂದ್ರ ಆಡಳಿತ ಪ್ರದೇಶ ಪುದುಚೇರಿಯ ಮತದಾನ ದಿನಾಂಕಗಳನ್ನು ಪ್ರಕಟಿಸಲಾಗಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries