ಕುಂಬಳೆ: ಪುತ್ತಿಗೆ ಪಂಚಾಯಿತಿ ಮುಗು ಶ್ರೀ ಸುಬ್ರಾಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳ ಹಿನ್ನೆಲೆಯಲ್ಲಿ ವಿಶೇಷ ಬಲಿವಾಡು ಕೂಟ ಫೆ. 28ರಂದು ದೇವಸ್ಥಾನದಲ್ಲಿ ಜರುಗಲಿದೆ. ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿ ಅವರ ದಿವ್ಯ ಉಪಸ್ಥಿತಿಯಲ್ಲಿ ಬಲಿವಾಡು ಕೂಟ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10ಕ್ಕೆ ಸಭಾ ಕಾರ್ಯಕ್ರಮ ಜರುಗಲಿದೆ.
ಈಗಾಗಲೇ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಕೈಗೆತ್ತಿಕೊಳ್ಳಲಾಗಿದ್ದು, ದೇವಾಲಯದ ಶಿಲಾಮಯ ಗರ್ಭಗುಡಿ, ನಮಸ್ಕಾರ ಮಂಟಪ, ಬಲಿಕಲ್ಲು ನಿರ್ಮಾಣಕಾರ್ಯಕ್ಕೆ ಕಾರ್ಕಳದ ಶಿಲ್ಷಿಗಳಿಗೆ ಮುಂಗಡಬಾಬ್ತು ಮೊತ್ತವನ್ನು ಹಸ್ತಾಂತರಿಸುವ ಕಾರ್ಯ ದೇವಾಲಯದಲ್ಲಿ ಇತ್ತೀಚೆಗೆ ಜರುಗಿತು.