HEALTH TIPS

ಪೂರ್ವ ಲಡಾಖ್‌ನಲ್ಲಿ ಸೇನೆ ಹಿಂಪಡೆಯುವಿಕೆ ಪ್ರಕ್ರಿಯೆ ಪೂರ್ಣ: ರಾಜನಾಥ್ ಸಿಂಗ್

           ಸೇಲಂ (ತಮಿಳುನಾಡು): ಪೂರ್ವ ಲಡಾಖ್‌ನಲ್ಲಿ ಭಾರತ-ಚೀನಾ ಸೇನೆ ಹಿಂಪಡೆಯುವಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಒಂಬತ್ತು ಸುತ್ತಿನ ರಾಜತಾಂತ್ರಿಕ ಹಾಗೂ ಸೇನಾ ಮಟ್ಟದ ಮಾತುಕತೆ ಬಳಿಕ ಇದು ಸಾಧ್ಯವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.


       ಭಾರತೀಯ ಜನತಾ ಯುವ ಮೋರ್ಚಾದ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, 'ಭಾರತವು ತನ್ನ ಗಡಿಯಲ್ಲಿ ಯಾವುದೇ ರೀತಿಯ ಏಕಪಕ್ಷೀಯ ಕ್ರಮಕ್ಕೆ ಅವಕಾಶ ನೀಡುವುದಿಲ್ಲ ಮತ್ತು ಅಂತಹ ಪ್ರಯತ್ನ ಕಂಡುಬಂದಲ್ಲಿ ಅದನ್ನು ತಡೆಯಲು ಯಾವುದೇ ರೀತಿಯ ಬೆಲೆ ತೆರಲೂ ಸಿದ್ಧವಿದೆ' ಎಂದು ಹೇಳಿದ್ದಾರೆ.

         'ಸೇನಾ ಹಿಂಪಡೆಯುವಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ದುರದೃಷ್ಟವಶಾತ್, ಭಾರತೀಯ ಸೇನೆಯ ಶೌರ್ಯದ ಬಗ್ಗೆ ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸುತ್ತಿದೆ. ಇದು ಮಹೋನ್ನತ ತ್ಯಾಗ ಮಾಡುವ ಯೋಧರನ್ನು ಅವಮಾನಿಸಿದಂತಲ್ಲವೇ' ಎಂದು ರಾಜನಾಥ್ ಪ್ರಶ್ನಿಸಿದ್ದಾರೆ.

         ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು ಎಂದಿಗೂ ಏಕತೆ, ಭೌಗೋಳಿಕ ಸಮಗ್ರತೆ ಹಾಗೂ ಸಾರ್ವಭೌಮತ್ವದ ವಿಚಾರದಲ್ಲಿ ರಾಜಿ ಮಾಡಿಕೊಂಡಿಲ್ಲ ಎಂದೂ ಅವರು ಹೇಳಿದ್ದಾರೆ.

        ಕಳೆದ ವರ್ಷ ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ಚೀನಾ ಯೋಧರ ಜತೆ ನಡೆದಿದ್ದ ಸಂಘರ್ಷದಲ್ಲಿ ಭಾರತೀಯ ಸೇನೆಯ 20 ಮಂದಿ ಹುತಾತ್ಮರಾಗಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries