ತಿರುವನಂತಪುರ: ವಿದೇಶದಿಂದ ಬರುವವರಿಗೆ ಕೇರಳದಲ್ಲಿ ಉಚಿತ ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗುವುದೆಂದು ಶುಕ್ರವಾರ ಸರ್ಕಾರ ತಿಳಿಸಿದೆ. ರಾಜ್ಯ ಸರ್ಕಾರ ಉಚಿತ ಕೊರೋನಾ ಪರೀಕ್ಷೆಯನ್ನು ನಡೆಸಲಿದ್ದು, ಫಲಿತಾಂಶಗಳನ್ನು ತಕ್ಷಣ ಜನರಿಗೆ ಕಳುಹಿಸಲಾಗುವುದು ಎಂದು ಆರೋಗ್ಯ ಸಚಿವೆ ಕೆ.ಕೆ.ಶೈಲಜ ಮಾಹಿತಿ ನೀಡಿದರು.
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲನ್ನು ಕೇಂದ್ರ ಸರ್ಕಾರ ಆದೇಶಿಸಿದೆ. ವೈರಸ್ನ ಹೊಸ ತಳಿಗಳು ಹರಡುವ ಸಾಧ್ಯತೆ ಇರುವುದರಿಂದ ಕಣ್ಗಾವಲು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಸೋಂಕು ಹರಡುವಲ್ಲಿ ಪ್ರಮುಖವಾಗಿರುವ ಕೇರಳಕ್ಕೆ ವಿಶೇಷ ಸೂಚನೆಗಳನ್ನು ನೀಡಲಾಗಿದೆ.
72 ಗಂಟೆಗಳ ಒಳಗೆ ಆರ್ಟಿಪಿಸಿಆರ್ ನಕಾರಾತ್ಮಕ ಪ್ರಮಾಣಪತ್ರವು ಈಗ ಮಕ್ಕಳು ಸೇರಿದಂತೆ ಎಲ್ಲಾ ವಯಸ್ಸಿನವರಿಗೆ ವಿದೇಶದಿಂದ ಭಾರತಕ್ಕೆ ಪ್ರಯಾಣಿಸುವವರಿಗೆ ಕಡ್ಡಾಯವಾಗಿದೆ. ಈವರೆಗೆ ಪ್ರಯಾಣಿಕರೇ ತಮ್ಮದೇ ವೆಚ್ಚದಲ್ಲಿ ಪರಿಶೀಲನೆ ನಡೆಸಬೇಕಿತ್ತು. ಆದರೆ, ವಲಸಿಗರು ಪ್ರತಿಭಟನೆ ನಡೆಸಿದ್ದರಿಂದ ಉಚಿತ ಕೊರೋನಾ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿತು.