HEALTH TIPS

ಕೇರಳದಿಂದ ದಕ್ಷಿಣ ಕನ್ನಡ ಪ್ರವೇಶಿಸಲು ನಾಳೆಯಿಂದ ನಾಲ್ಕೇ ದಾರಿ-ಜಿಲ್ಲಾಧಿಕಾರಿ ಆದೇಶ

      ಮಂಗಳೂರು: ಕೇರಳದಲ್ಲಿ ಕೋವಿಡ್  ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ   ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಅವರು ದಕ್ಷಿಣ ಕನ್ನಡ ಪ್ರವೇಶಿಸುವ   ತಲಪಾಡಿ ಸಹಿತ  ನಾಲ್ಕು ಪ್ರಮುಖ ಪ್ರವೇಶಗಳನ್ನು ಹೊರತುಪಡಿಸಿ ಎಲ್ಲಾ ಅಂತರ್ ರಾಜ್ಯ ಗಡಿಗಳನ್ನು ಮುಚ್ಚುವ ಆದೇಶವನ್ನು ಹೊರಡಿಸಿದ್ದಾರೆ.
     ಕೇರಳದ ಪ್ರಯಾಣಿಕರು ಕರ್ನಾಟಕಕ್ಕೆ ಪ್ರವೇಶಿಸಲು ನಾಲ್ಕು ಚೆಕ್ ಪೋಸ್ಟ್‌ಗಳ ಮೂಲಕ ಮಾತ್ರ ಸಂಚರಿಸಬಹುದಾಗಿದ್ದು, ಉಳಿದ ಎಲ್ಲಾ ಪ್ರವೇಶ ಕೇಂದ್ರಗಳು ಸೋಮವಾರದಿಂದ ಮುಚ್ಚಲ್ಪಡುತ್ತವೆ ಎಂದು    ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.
        ಕೇರಳದಿಂದ ಕರ್ನಾಟಕ
ಪ್ರವೇಶಕ್ಕೆ ನಾಲ್ಕೆ ದಾರಿ!
       ನೆಗೆಟಿವ್ ವರದಿ ಇದ್ದರೆ ಮಾತ್ರ ಅವಕಾಶ
     : ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ
ಮತ್ತು ನಿರ್ಗಮಿಸುವ ಪ್ರಯಾಣಿಕರಿಗೆ ಸಂಚಾರಕ್ಕೆ ಅನುಕೂಲವಾಗುವಂತೆ ಫೆ.
22ರಿಂದ ದ.ಕ.-ಕೇರಳ ರಾಜ್ಯದ ಕಾಸರಗೋಡು ಗಡಿಭಾಗದಲ್ಲಿ 4 ಚೆಕ್‌ಪೋಸ್ಟ್
ಗಳಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಿ ಉಳಿದಂತೆ ಎಲ್ಲ ಗಡಿಗಳಲ್ಲಿ ಸಂಚಾರವನ್ನು
ನಿರ್ಬಂಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ: ರಾಜೇಂದ್ರ ಆದೇಶಿಸಿದ್ದಾರೆ.

       ತಲಪಾಡಿ, ಸಾರಡ್ಕ ನೆಟ್ಟಣಿಗೆ ಮುಡ್ನೂರು -ಮೇನಾಲ ಮತ್ತು ಜಾಲ್ಸೂರಿ
ನಲ್ಲಿ ಚೆಕ್‌ಪೋಸ್ಟ್ ನಿರ್ಮಿಸಲಾಗಿದೆ. ಅಲ್ಲಿ ಆರೋಗ್ಯ ಇಲಾಖೆಯ ಒಂದು ತಂಡ
ನಿಯೋಜಿಸಿ ವೈದ್ಯಕೀಯ ತಪಾಸಣೆ ಹಾಗೂ ಸ್ಕ್ರೀನಿಂಗ್ ನಡೆಸಲು ಕ್ರಮ ಕೈಗೊಳ್ಳ
ಲಾಗಿದೆ. ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರೂ 72 ಗಂಟೆಯೊಳಗೆ ನಡೆಸಲಾದ 
ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯ. ಇದನ್ನು
ಪರಿಶೀಲಿಸಿಯೇ ಜಿಲ್ಲೆ ಪ್ರವೇಶಿಸಲು ಅನುಮತಿಸಲಾಗುತ್ತದೆ. ಕ್ಯಾಟ್ ಪರೀಕ್ಷಾ
ವರದಿಗೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
        ದೈನಂದಿನ ಪ್ರಯಾಣಿಕರ ಮಾಹಿತಿಯನ್ನು ಪ್ರತ್ಯೇಕವಾಗಿ ಪಡೆಯಬೇಕು.
ಪ್ರತಿದಿನ ಪ್ರಯಾಣಿಸುವ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ತಮ್ಮ
ಗುರುತಿನ ಚೀಟಿಯನ್ನು ಹಾಗೂ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು
ಚೆಕ್‌ಪೋಸ್ಟ್‌ನಲ್ಲಿ ಸಲ್ಲಿಸಬೇಕು. ಆ್ಯಂಬುಲೆನ್ಸ್‌ಗಳಿಗೆ ಯಾವುದೇ ನಿರ್ಬಂಧ
ಇರುವುದಿಲ್ಲ. ತುರ್ತು ಚಿಕಿತ್ಸೆಗೆ ಆ್ಯಂಬುಲೆನ್ಸ್‌ಗಳಲ್ಲಿ ಬರುವ ರೋಗಿಗಳು ಮತ್ತು
ಸಹವರ್ತಿಗಳು ಆಯಾ ಆಸ್ಪತ್ರೆಗಳಲ್ಲಿ ಕೋವಿಡ್ ಆರ್‌ಟಿಪಿಸಿಆರ್ ತಪಾಸಣೆಗೆ
ಒಳಗಾಗಬೇಕು ಎಂದು ಸೂಚಿಸಲಾಗಿದೆ.
           ಶಿಕ್ಷಣ ಸಂಸ್ಥೆಗಳಿಗೆ ಸೂಚನೆ:
     ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ನೋಡೆಲ್ ಅಧಿಕಾರಿಗಳನ್ನು
ನೇಮಿಸಿಸಬೇಕು. ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳನ್ನು ರ್ಯಾಂಡಮ್ ಟೆಸ್ಟ್ ಗೆ 
 ಒಳಪಡಿಸಬೇಕು ಎಂದು ಸೂಚಿಸಲಾಗಿದೆ.
       ಬಸ್‌ಗಳಲ್ಲಿ ಬರುವವರು ಕಡ್ಡಾಯವಾಗಿ ಕೋವಿಡ್ -19 ನಕಾರಾತ್ಮಕ ಪ್ರಮಾಣಪತ್ರಗಳನ್ನು ತೋರಿಸಬೇಕು. ವಿದ್ಯಾರ್ಥಿಗಳು ಮತ್ತು ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಕೇರಳದ ದೈನಂದಿನ ಪ್ರಯಾಣಿಕರ ಪ್ರತ್ಯೇಕ ಡೇಟಾವನ್ನು ಸಂಗ್ರಹಿಸಲಾಗುವುದು. ಅವರು ಕೋವಿಡ್ -19 ನಕಾರಾತ್ಮಕ ಪ್ರಮಾಣಪತ್ರಗಳನ್ನು ಹೊಂದಿರಬೇಕು ಮತ್ತು 15 ದಿನಗಳಿಗೊಮ್ಮೆ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಅವರು ಹೇಳಿದರು.
     ಏತನ್ಮಧ್ಯೆ, ಕೇರಳದ ಎಲ್ಲಾ ಪ್ರಯಾಣಿಕರ ವಿವರಗಳನ್ನು ನಮೂದಿಸಲಾಗುವುದು ಮತ್ತು ತಹಶೀಲ್ದಾರ್ಗಳು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಆಯಾ ತಾಲ್ಲೂಕುಗಳ ಆರೋಗ್ಯ ಅಧಿಕಾರಿಗಳಿಗೆ ಕಳುಹಿಸಲಾಗುವುದು. ಆಯಾ ಪ್ರದೇಶಗಳ ತಹಶೀಲ್ದಾರ್‌ಗಳು ವ್ಯವಸ್ಥೆ ಮಾಡಲಿದ್ದು, ಪೊಲೀಸ್ ತಂಡಗಳನ್ನೂ ನಿಯೋಜಿಸಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.





Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries