HEALTH TIPS

ರಾಜ್ಯದಲ್ಲಿ ಇಂದು 1938 ಮಂದಿಗೆ ಕೋವಿಡ್ ದೃಢ-ಕಾಸರಗೋಡು-71 ಮಂದಿಗೆ ಸೋಂಕು

              ತಿರುವನಂತಪುರ: ರಾಜ್ಯದಲ್ಲಿ ಇಂದು 1938 ಮಂದಿ ಜನರಿಗೆ ಕೋವಿಡ್ ಖಚಿತಪಡಿಸಲಾಗಿದೆ. ಕೋಝಿಕೋಡ್ 380, ಮಲಪ್ಪುರಂ 241, ಎರ್ನಾಕುಳಂ 240, ಕಣ್ಣೂರು 198, ಆಲಪ್ಪುಳ 137, ಕೊಲ್ಲಂ 128, ತಿರುವನಂತಪುರ 118, ತ್ರಿಶೂರ್ 107, ಕೊಟ್ಟಾಯಂ 103, ಕಾಸರಗೋಡು 71, ಪತ್ತನಂತಿಟ್ಟು 62, ವಯನಾಡ್ 62, ಪಾಲಕ್ಕಾಡ್ 56, ಇಡುಕ್ಕಿ 35 ಎಂಬಂತೆ ಸೋಂಕು  ಪತ್ತೆಯಾಗಿದೆ.


            ಕಳೆದ 24 ಗಂಟೆಗಳಲ್ಲಿ ಯುಕೆ ಯಿಂದ ಬಂದ ಯಾರಿಗೂ ಸೋಂಕು ಕಂಡುಬಂದಿಲ್ಲ. ಇತ್ತೀಚೆಗೆ ಯುಕೆ ಯಿಂದ ಬಂದ 94 ಜನರಿಗೆ ಕೋವಿಡ್ ದೃಢಪಡಿಸಲಾಗಿತ್ತು. ಈ ಪೈಕಿ 82 ಮಂದಿಗೆ ಋಣಾತ್ಮಕವಾಗಿದೆ. ಒಟ್ಟು 11 ಜನರಿಗೆ ಜೆನೆಟಿಕ್ ಮಾರ್ಪಟ್ಟ ರೂಪಾಂತರಿ  ವೈರಸ್ ಇರುವುದು ಪತ್ತೆಯಾಗಿದೆ.

           ಕಳೆದ 24 ಗಂಟೆಗಳಲ್ಲಿ 45,995 ಮಾದರಿಗಳನ್ನು ಪರೀಕ್ಷಿಸಲಾಯಿತು. ಪರೀಕ್ಷಾ ಸಕಾರಾತ್ಮಕತೆ ದರ ಶೇ.4.21. ಆಗಿದೆ. ನಿಯತ ಮಾದರಿ, ಸೆಂಟಿನೆಲ್ ಮಾದರಿ, ಸಿಬಿಎಸ್ ಟಿ, ಟ್ರುನಾಟ್, ಪಿಒಸಿಟಿ. ಪಿಸಿಆರ್, ಆರ್ಟಿ ಎಲ್.ಎ.ಎಂ.ವಿ ಮತ್ತು ಪ್ರತಿಜನಕ ಪರೀಕ್ಷೆ ಸೇರಿದಂತೆ ಒಟ್ಟು 1,15,22,279 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

       ಕಳೆದ 24 ಗಂಟೆಗಳಲ್ಲಿ 13 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 4,210 ಕ್ಕೆ ಏರಿಕೆಯಾಗಿದೆ. ಇಂದು, ಸೋಂಕು ನಿರ್ಣಯ ಮಾಡಿದವರಲ್ಲಿ 56 ಮಂದಿ ರಾಜ್ಯದ ಹೊರಗಿಂದ ಬಂದವರು. ಸಂಪರ್ಕದ ಮೂಲಕ 1743 ಮಂದಿ ಜನರಿಗೆ ಸೋಂಕು ತಗುಲಿತು. 124 ಮಂದಿಗೆ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಕೋಝಿಕೋಡ್ 361, ಮಲಪ್ಪುರಂ 237, ಎರ್ನಾಕುಳಂ 229, ಕಣ್ಣೂರು 175, ಆಲಪ್ಪುಳ 133, ಕೊಲ್ಲಂ 125, ತಿರುವನಂತಪುರ 74, ತ್ರಿಶೂರ್ 104, ಕೊಟ್ಟಾಯಂ 93, ಕಾಸರಗೋಡು 53, ಪತ್ತನಂತಿಟ್ಟು 53, ವಯನಾಡ್ 57, ಪಾಲಕ್ಕಾಡ್ 12, ಇಡುಕ್ಕಿ 32 ಎಂಬಂತೆ ಸಂಪರ್ಕದಿಂದ ಸೋಂಕು ಬಾಧಿಸಿದೆ. 

            ಹದಿನೈದು ಮಂದಿ ಆರೋಗ್ಯ ಕಾರ್ಯಕರ್ತರಿಗೆ ಇಂದು ಸೋಂಕು ಕಂಡುಬಂದಿದೆ. ಕಣ್ಣೂರು 5, ಎರ್ನಾಕುಳಂ 3, ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟು, ಇಡುಕಿ, ಪಾಲಕ್ಕಾಡ್, ವಯನಾಡ್ ಮತ್ತು ಕಾಸರಗೋಡು ತಲಾ 1 ಎಂಬಂತೆ ಸೋಂಕು ದೃಢಪಟ್ಟಿದೆ. 

            ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 3475 ಮಂದಿ ಜನರ ಪರೀಕ್ಷಾ ಫಲಿತಾಂಶಗಳು ನಕಾರಾತ್ಮಕವಾಗಿವೆ. ತಿರುವನಂತಪುರ 171, ಕೊಲ್ಲಂ 244, ಪತ್ತನಂತಿಟ್ಟು 488, ಆಲಪ್ಪುಳ 417, ಕೊಟ್ಟಾಯಂ 256, ಇಡುಕಿ 40, ಎರ್ನಾಕುಳಂ 500, ತ್ರಿಶೂರ್ 272, ಪಾಲಕ್ಕಾಡ್ 135, ಮಲಪ್ಪುರಂ 377, ಕೊಝಿಕೋಡ್ 341, ವಯನಾಡ್ 27, ಕಣ್ಣೂರು 158, ಕಾಸರಗೋಡು 49 ಎಂಬಂತೆ ಪರೀಕ್ಷೆಗಳಲ್ಲಿ ನೆಗೆಟಿವ್ ಆಗಿದೆ.  ಇದರೊಂದಿಗೆ 47,868 ಮಂದಿ ಜನರಿಗೆ ಸೋಂಕು ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 10,08,972 ಮಂದಿ ಕೋವಿಡ್‍ನಿಂದ ಮುಕ್ತರಾಗಿದ್ದಾರೆ.

           ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 2,07,915 ಮಂದಿ ಜನರು ಕಣ್ಗಾವಲಿನಲ್ಲಿದ್ದಾರೆ. ಈ ಪೈಕಿ 2,00,756 ಮಂದಿ ಮನೆ / ಸಾಂಸ್ಥಿಕ ಸಂಪರ್ಕತಡೆ ಮತ್ತು 7,159 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಒಟ್ಟು 711 ಜನರನ್ನು ಇಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಹೊಸ ಹಾಟ್‍ಸ್ಪಾಟ್ ಇಲ್ಲ. ಯಾವುದೇ ಪ್ರದೇಶವನ್ನು ಹಾಟ್‍ಸ್ಪಾಟ್‍ನಿಂದ ಹೊರಗಿಡಲಾಗಿಲ್ಲ. ಪ್ರಸ್ತುತ ಒಟ್ಟು 367 ಹಾಟ್‍ಸ್ಪಾಟ್‍ಗಳಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries