ತಿರುವನಂತಪುರ: ಶಬರಿಮಲೆ ಮಹಿಳಾ ಪ್ರವೇಶ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯಲ್ಲಿ ದಾಖಲಾದ ಗಂಭೀರವಲ್ಲದ ಪ್ರಕರಣಗಳನ್ನು ಹಿಂಪಡೆಯಲು ಆದೇಶ ಹೊರಡಿಸಲಾಗಿದೆ. ಈ ಹಿಂದೆ ಪ್ರಕರಣಗಳನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿತ್ತು.
ನೋಂದಾಯಿತ ಪ್ರಕರಣಗಳ ಪ್ರಸ್ತುತ ಸ್ಥಿತಿ ಮತ್ತು ಸ್ವರೂಪವನ್ನು ಪರಿಶೀಲಿಸಿದ ನಂತರ ಡಿಜಿಪಿ, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೋಲೀಸ್ ಮುಖ್ಯಸ್ಥರು ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.






