HEALTH TIPS

ಅಕ್ಕಿ ಸರಬರಾಜನ್ನು ನಿರ್ಬಂಧಿಸಿದ್ದಕ್ಕಾಗಿ ಚುನಾವಣಾ ಆಯೋಗದ ವಿರುದ್ಧ ಸರ್ಕಾರದಿಂದ ಕಾನೂನು ಕ್ರಮ!

                 

       ತಿರುವನಂತಪುರ: ಚುನಾವಣಾ ನೀತಿ ಸಂಹಿತೆ ಹೆಸರಲ್ಲಿ ಅಕ್ಕಿ ಸರಬರಾಜನ್ನು ನಿರ್ಬಂಧಿಸಿದ್ದಕ್ಕಾಗಿ ರಾಜ್ಯ ಸರ್ಕಾರ ಚುನಾವಣಾ ಆಯೋಗದ ವಿರುದ್ಧ ಕಾನೂನು ಕ್ರಮ ಕೈಗೊಂಡಿದೆ. ಆದ್ಯತೆಯಿಲ್ಲದ ವಿಭಾಗಗಳಿಗೆ 15 ರೂ.ದರದಲ್ಲಿ 10 ಕೆಜಿ ಅಕ್ಕಿ ನೀಡುವ ನಿರ್ಧಾರವನ್ನು ಚುನಾವಣಾ ಆಯೋಗ


ನಿರ್ಬಂಧಿಸಿದೆ. ಇದರ ವಿರುದ್ಧ ನ್ಯಾಯಾಲಯದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಆಹಾರ ಇಲಾಖೆ ನಿರ್ಧರಿಸಿದೆ. ಚುನಾವಣೆಗೆ ಮುನ್ನ ಅಕ್ಕಿ ವಿತರಿಸಲು ಪ್ರಸ್ತುತ ಇಲಾಖೆ ಮುಂದಾಗಲಿದೆ. 

        ಮತದಾರರನ್ನು ಓಲೈಸುವ ಉದ್ದೇಶದಿಂದ ಪಿಣರಾಯಿ ಸರ್ಕಾರ ಅಕ್ಕಿ ವಿತರಿಸಲು ಯೋಜಿಸುತ್ತಿದೆ ಎಂದು ಪ್ರತಿಪಕ್ಷಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಇದನ್ನು ಚುನಾವಣಾ ಆಯೋಗ ನಿರ್ಬಂಧಿಸಿದೆ. ರಮೇಶ್ ಚೆನ್ನಿತ್ತಲ ಅವರ ದೂರಿನ ಆಧಾರದ ಮೇಲೆ ಚುನಾವಣಾ ಆಯೋಗ ಸರ್ಕಾರದಿಂದ ವಿವರಣೆ ಕೋರಿತ್ತು. ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಅಕ್ಕಿ ವಿತರಿಸಲು ತೀರ್ಮಾನಿಸಲಾಗಿತ್ತು. ವಿಶು ಮತ್ತು ಈಸ್ಟರ್ ಸಂದರ್ಭದಲ್ಲಿ ಅಕ್ಕಿ ನೀಡಲಾಗುವುದು ಎಂದು ಸರ್ಕಾರ ತಿಳಿಸಿತ್ತು.

            ಏತನ್ಮಧ್ಯೆ, ರಾಜ್ಯ ಸರ್ಕಾರವು ವಿಶುಕಿಟ್ ವಿತರಣೆಯನ್ನು ಏಪ್ರಿಲ್ 1 ಕ್ಕೆ ಮುಂದೂಡಿದೆ. ಈ ಹಿಂದೆ ಮಾರ್ಚ್ ಕೊನೆಯ ವಾರದಲ್ಲಿ ನಿಗದಿಯಾಗಿದ್ದ ವಿಶು ಕಿಟ್ ವಿತರಣೆಯನ್ನು ಏಪ್ರಿಲ್‍ಗೆ ವರ್ಗಾಯಿಸಲಾಗಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries