HEALTH TIPS

ಮತದಾನದ ಬಗ್ಗೆ ಶತಾಯುಷಿಯಿಂದ ಜಾಗೃತಿ, ಗೌರವಾರ್ಪಣೆ

     ಕಾಸರಗೋಡು: ಪುಲಿಯಂಕುಳಂ ನೆಲ್ಲಿಯರ ಕಾಲನಿ ನಿವಾಸಿ ಚಾಣಮೂಪ್ಪನ್ ಎಂಬ 106 ವರ್ಷ ಪ್ರಾಯದ ಹಿರಿಯ ಮತದಾರರೊಬ್ಬರು ಈ ಬಾರಿಯೂ ತಮ್ಮ ಮತಚಲಾಯಿಸುವ ಇಂಗಿತ ವ್ಯಕ್ತಪಡಿಸಿದ್ದು, ಜತೆಗೆ ಜನಜಾಗೃತಿ ಮೂಡಿಸುವಲ್ಲೂ ಮುಂಚೂಣಿಯಲ್ಲಿದ್ದಾರೆ.  ವಾಹನ ಸೌಲಭ್ಯ ಇಲ್ಲದ ಕಾಲಾವಧಿಯಲ್ಲೂ ಎರಡು ದಿನ ಮುನ್ನವೇ ನಡೆದು ಸಾಗಿ ಮತದಾನ ನಡೆಸಿದ ತಮ್ಮ ನೆನಪನ್ನು ಈ ಹಿರಿಯ ಚೇತನ ಮೆಲುಕು ಹಾಕುತ್ತಾರೆ. ಕೂಲಿಕಾರ್ಮಿಕರಾಗಿ, ಜಾನುವಾರು ಮೇಯಿಸುವ ಕಾಯಕ ನಡೆಸಿ ಬದುಕುತ್ತಿರುವ ಇವರು ಪ್ರಜಾಪ್ರಭುತ್ವ ನೀತಿಯ ಮಹತ್ವ ತಿಳಿದಿದ್ದಾರೆ. ಹೊಸ ತಲೆಮಾರಿನ ಜನತೆಗೆ ಮತದಾನ ಜಾಗೃತಿ ಮೂಡಿಸುವ ಕಾಯದಲ್ಲೂ ಚಾಣಮೂಪನ್ ಅವರುಉತ್ಸಾಹ ತೋರುತ್ತಿದ್ದಾರೆ.

ಮತದಾನ ಜಾಗೃತಿ ಕಾರ್ಯಕ್ರಮ ಅಂಗವಾಗಿ ಕಾಞಂಗಾಡ್ ವಿಧಾನಸಭೆ ಕ್ಷೇತ್ರದ ಕಿನಾನೂರು-ಕರಿಂದಳಂ ಗ್ರಾಮ ಪಂಚಾಯಿತಿಯ ನೆಲ್ಲಿಯರ ಕಾಲನಿಯ ಮೂಪ್ಪನ್ ಆಗಿರುವ ಚಾಣಮೂಪ್ಪನ್ ಅವರನ್ನು ಗೌರವಿಸಲಾಗಿದೆ.  ಕಾಲನಿಯಲ್ಲಿ ನಡೆದ ಸಮಾರಂಭದಲ್ಲಿ ಸ್ವೀಪ್ ಜಿಲ್ಲಾ ನೋಡೆಲ್ ಅಧಿಕಾರಿ ಕವಿತಾರಾಣಿ ರಂಜಿತ್ ಅವರು ಚಾಣಮೂಪ್ಪನ್ ಅವರನ್ನು ಗೌರವಿಸಿದರು.  ಪತ್ನಿ ಕೊರುಂಬಿ, ಮೂವರು ಮಕ್ಕಳೂ ಜತೆಗಿದ್ದರು. ಈ ಸಂದರ್ಭ ಮತದಾನ ಜಾಗೃತಿ ಪ್ರತಿಜ್ಞೆ ಬೋಧಿಸಲಾಯಿತು. ಸ್ವೀಪ್ ಕಾರ್ಯಕರ್ತರಾದ ಎಂ.ಕೆ.ನಿಷಾ ನಂಬಪೆÇಯಿಲ್, ದಿಲೀಷ್ ಎ., ಝುಬೈರ್, ವಿನೋದ್ ಕುಮಾರ್ ಕೆ., ವಿದ್ಯಾ ವಿ., ಆನ್ಸ್, ಮೋಹನದಾಸ್ ವಯಲಾಕುಳಿ, ಕ್ರಿಸ್ಟಿ, ವಿಪಿನ್ ಡಿ, ರಜೀಷಾ, ಸುನಾ ಎಸ್.ಚಂದ್ರನ್ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮ ಅಂಗವಾಗಿ ಸ್ಥಳೀಯರಿಂದ ಮಂಗಲಂಕಳಿ ಜರುಗಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries