HEALTH TIPS

ಪ್ರೊ.ಎ. ಶ್ರೀನಾಥ್ ಅವರಿಗೆ ಪ್ರತಿಷ್ಠಿತ ಜಾನಪದ ಲೋಕ ಪ್ರಶಸ್ತಿಯ ಗರಿ

         ಕಾಸರಗೋಡು: ಕರ್ನಾಟಕ ಜಾನಪದ ಪರಿಷತ್ತಿನ ಪ್ರತಿಷ್ಠಿತ 'ಜಾನಪದ ಲೋಕ' ಪ್ರಶಸ್ತಿಗೆ ಕಾಸರಗೋಡಿನ ಬಹುಶ್ರುತ ವಿದ್ವಾಂಸ, ಜಾನಪದ ಕಲಾವಿದ, ಯಕ್ಷಗಾನ ಪೋಷಕ ಪ್ರೊ.ಎ ಶ್ರೀನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.


         ಜಾನಪದ ಕಲೆಯ ಉಳಿವಿಗೆ ನೀಡಿದ ಸೇವೆ ಹಾಗೂ ಜಾನಪದ ಕ್ಷೇತ್ರದ ಜೀವಮಾನದ ಸಾಧನೆಯನ್ನು ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ಕಜಾಪ ಕೇಂದ್ರ ಸಮಿತಿ ಅಧ್ಯಕ್ಷ ಟಿ.ತಿಮ್ಮೇಗೌಡ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಾ. 12 ರಿಂದ 14 ರ ವರೆಗೆ ಬೆಂಗಳೂರು ರಾಮನಗರದಲ್ಲಿರುವ ಜಾನಪದ ಲೋಕದಲ್ಲಿ ಪ್ರವಾಸಿ ಜಾನಪದ ಲೋಕೋತ್ಸವ ನಡೆಯಲಿದ್ದು, ಮಹಾಮೇಳದ 2ನೇ ದಿನ ಮಾ.13 ರಂದು ಅಪರಾಹ್ನ ಜರಗಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 10 ಸಾವಿರ ರೂ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

          ಕಳೆದ ನಾಲ್ಕು ದಶಕಗಳಿಂದ ಕಾಸರಗೋಡಿನ ಸಾಮಾಜಿಕ, ಸಾಂಸ್ಕøತಿಕ, ಸಾಹಿತ್ಯಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸದಾ ಸಕ್ರಿಯರಾಗಿ ಗುರುತಿಸಿಕೊಂಡಿರುವ ಪೆÇ್ರ. ಶ್ರೀನಾಥ್ ಅವರು ಸಮರ್ಥ ಜಾನಪದ ಸಂಘಟಕರೂ, ಜಾನಪದ ವಿದ್ವಾಂಸರೂ, ಕಲಾವಿದರೂ ಆಗಿದ್ದಾರೆ. ಕಾಸರಗೋಡು ಸರ್ಕಾರಿ ಕಾಲೇಜಿನ ಕನ್ನಡ ವಿಭಾಗ ಉಪನ್ಯಾಸಕರಾಗಿ ಸಹಸ್ರಾರು ವಿದ್ಯಾರ್ಥಿಗಳಿಗೆ ವಿದ್ಯಾ ಬೋಧನೆಗೈದಿರುವ ಅವರು ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries