HEALTH TIPS

ಪೆಟ್ರೋಲ್, ಡಿಸೇಲ್ ಬೆಲೆ ತಗ್ಗಿಸಲು ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರರು ಸರ್ಕಾರಕ್ಕೆ ಹೇಳಿದ್ದೇನು?

       ನವದೆಹಲಿ: ಪೆಟ್ರೋಲ್, ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗುತ್ತಿದ್ದಾರೆ. ಇವುಗಳ ದರ ಇಳಿಸುವುದು ಹೇಗಪ್ಪಾ ಎಂದು ಕೇಂದ್ರ ಸರ್ಕಾರ ತಲೆ ಮೇಲೆ ಕೈ ಹೊತ್ತು ಕೂತಿದೆ. ಆದರೆ ಬೆಲೆ ಮಾತ್ರ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲಿದೆ.


       ಬೆಲೆ ಏರಿಕೆ ತಗ್ಗಿಸಲು ಹೊಸ ಉಪಾಯ ಹೇಳಿರುವ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರ ಕೆ ವಿ ಸುಬ್ರಮಣಿಯನ್ ಅವರು ಪೆಟ್ರೋಲಿಯಂ ಉತ್ಪನ್ನಗಳನ್ನು ಕೇಂದ್ರ ಸರ್ಕಾರ ಜಿಎಸ್​ಟಿ ವ್ಯಾಪ್ತಿಯಲ್ಲಿ ತರಬೇಕು ಎಂದು ಹೇಳಿದ್ದಾರೆ. ಆದರೆ, ಈ ನಿರ್ಧಾರವನ್ನು ಜಿಎಎಸ್​ಟಿ ಕೌನ್ಸಿಲ್ ತೆಗೆದುಕೊಳ್ಳಬೇಕಾಗುತ್ತದೆ. ಒಂದು ವೇಳೆ ಜಿಎಸ್​ಟಿ ಕೌನ್ಸಿಲ್ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್​ಟಿ ವ್ಯಾಪ್ತಿಗೆ ತಂದರೆ ಅದೊಂದು ಅತ್ಯುತ್ತಮ ಬೆಳವಣಿಗೆ ಎಂದು ಖಾಸಗಿ ಕಾರ್ಯಕ್ರಮವೊಂದರಲ್ಲಿ ಅವರು ಹೇಳಿದ್ದಾರೆ.

           ಇತ್ತೀಚೆಗಷ್ಟೇ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡ, ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್​ಟಿ ವ್ಯಾಪ್ತಿಗೆ ತರಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಒತ್ತಾಯಿಸಿದ್ದರು. ಅದಾಗ್ಯೂ ಏಪ್ರೀಲ್ ನಂತರ ತೈಲ ಬೆಲೆಯಲ್ಲಿ ಇಳಿಕೆ ಕಾಣಲಿದೆ ಎಂದು ಪ್ರಧಾನ್ ನಿನ್ನೆ ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries