HEALTH TIPS

World Water Day 'ಮಳೆ ನೀರು ಹಿಡಿಯಿರಿ' ಅಭಿಯಾನಕ್ಕೆ ನಾಳೆ ಮೋದಿ ಚಾಲನೆ

           ನವದೆಹಲಿ: ವಿಶ್ವ ಜಲ ದಿನದ ಅಂಗವಾಗಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು 'ಕ್ಯಾಚ್‌ ದಿ ರೈನ್‌' (ಮಳೆ ನೀರು ಹಿಡಿಯಿರಿ) ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

       ದೇಶದಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗುವುದು. 'ಬಿದ್ದ ಜಾಗದಲ್ಲೇ, ಬಿದ್ದ ಸಮಯದಲ್ಲೇ ಮಳೆ ನೀರನ್ನು ಹಿಡಿದು ಸಂಗ್ರಹಿಸಬೇಕು' ಎಂಬುದನ್ನು ತಿಳಿಸುವುದು ಅಭಿಯಾನದ ಉದ್ದೇಶವಾಗಿದೆ' ಎಂದು ಪ್ರಧಾನಿ ಕಚೇರಿ ತಿಳಿಸಿದೆ.

        ಮಾರ್ಚ್‌ 22ರಿಂದ ನವೆಂಬರ್‌ 30ರವರೆಗೆ ಈ ಅಭಿಯಾನ ನಡೆಯಲಿದೆ. ನೀರು ಸಂರಕ್ಷಿಸುವ ಈ ಕಾರ್ಯದಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವ ಮೂಲಕ ಈ ಅಭಿಯಾನವು ಜನಾಂದೋಲನವಾಗಲಿದೆ ಎಂದು ತಿಳಿಸಿದೆ.

      ಈ ಕಾರ್ಯಕ್ರಮದ ಬಳಿಕ ಚುನಾವಣೆ ನಡೆಯುವ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿನ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಜಲ ಸಂರಕ್ಷಣೆ ಬಗ್ಗೆ ಗ್ರಾಮಸಭೆಗಳು ನಡೆಯಲಿವೆ. ಇದೇ ಸಂದರ್ಭದಲ್ಲಿ ಜನರು 'ಜಲ ಪ್ರಮಾಣ ವಚನ'ವನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries