:
ತಿರುವನಂತಪುರ: ಕೋವಿಡ್ ವ್ಯಾಪಕಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರುವ ಬಗ್ಗೆ ಮುಖ್ಯಮಂತ್ರಿ ಇಂದು ಸೂಚನೆ ನೀಡಿರುವರು. ಮೇ 4 ರಿಂದ ಮೇ.9ರ ವರೆಗೆ ರಾಜ್ಯಾದ್ಯಂತ ಕಠಿಣ ನಿಬಂಧನೆ ಹೇರಲಾಗುವುದೆಂದು ಅವರು ತಿಳಿಸಿರುವರು. ಈ ಬಗೆಗಿನ ಸಂಪೂರ್ಣ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದೆಂದೂ ಅವರು ಸೂಚನೆ ನೀಡಿರುವರು.
ಇಂದು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗರಿಷ್ಠ 38,000 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ವರದಿಗಳು ದೃಢಪಟ್ಟಿದೆ. ಇಂದು, ಸೋಂಕು ಪತ್ತೆಯಾದವರಲ್ಲಿ 300 ಮಂದಿ ರಾಜ್ಯದ ಹೊರಗಿಂದ ಬಂದÀವರು. ಸಂಪರ್ಕದ ಮೂಲಕ 35,577 ಮಂದಿ ಜನರಿಗೆ ಸೋಂಕು ತಗುಲಿತು. 2620 ಮಂದಿಯ ಸಂಪರ್ಕದ ಮೂಲ ಸ್ಪಷ್ಟವಾಗಿಲ್ಲ.