HEALTH TIPS

ಕೆ.ಟಿ.ಜಲೀಲ್ ಅವರ ಮನವಿಯನ್ನು ತಿರಸ್ಕರಿಸಿದ ಹೈಕೋರ್ಟ್: ಸರ್ಕಾರಕ್ಕೆ ಹಿನ್ನಡೆ

                                  

                ಕೊಚ್ಚಿ: ಮಾಜಿ ಸಚಿವ ಕೆ.ಟಿ.ಜಲೀಲ್ ಅವರಿಗೆ ದೊಡ್ಡ ಹಿನ್ನಡೆ ಉಂಟಾಗಿದೆ. ಜಲೀಲ್ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತು. ಲೋಕಾಯುಕ್ತ ಆದೇಶದ ವಿರುದ್ಧ ಜಲೀಲ್ ಹೈಕೋರ್ಟ್ ಸಂಪರ್ಕಿಸಿದ್ದರು. ಆದರೆ, ಲೋಕಾಯುಕ್ತರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದು ಅರ್ಜಿಯನ್ನು ವಜಾಗೊಳಿಸಿದೆ. ಜಲೀಲ್ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದನ್ನು ನ್ಯಾಯಾಲಯ ಗಮನಿಸಿದೆ.

            ಸಂಬಂಧಿಯೋರ್ವನಿಗೆ ಉದ್ಯೋಗ ಮಾಡಿಸಿಕೊಟ್ಟ  ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಟಿ.ಜಲಿಲ್ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಲೋಕಾಯುಕ್ತ ಹೇಳಿತ್ತು.  ಸಚಿವರಿಗೆ ಅಧಿಕಾರದಲ್ಲಿರಲು ಅರ್ಹತೆ ಇಲ್ಲ ಎಂದು ಲೋಕಾಯುಕ್ತರು ಹೇಳಿದ್ದರು. ಈ ಆದೇಶದ ವಿರುದ್ಧ ಜಲೀಲ್ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ತಾನು ಕಾನೂನು ಬಾಹಿರ ಕಾರ್ಯವಿಧಾನವನ್ನು ಅನುಸರಿಸಿಲ್ಲ ಮತ್ತು ನಿಯಮಗಳ ಪ್ರಕಾರ ಆದೇಶವನ್ನು ನೀಡಿದ್ದೆ ಎಂದು ಜಲೀಲ್ ಅರ್ಜಿಯಲ್ಲಿ ತಿಳಿಸಿದ್ದರು. ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಡೆಸದೆ ಅಂತಿಮ ತೀರ್ಪು ನೀಡಲಾಗಿದೆ ಎಂದು ಜಲೀಲ್ ಹೇಳಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರವೂ ಜಲೀಲ್ ಅವರನ್ನು ಬೆಂಬಲಿಸಿತು.

                ಆದರೆ, ಲೋಕಾಯುಕ್ತ ಎಲ್ಲಾ ವಿಚಾರಣೆಯನ್ನು ಪರಿಶೀಲಿಸಿದ ನಂತರ ಈ ಆದೇಶ ಹೊರಡಿಸಲಾಗಿದೆ ಎಂದು ಹೈಕೋರ್ಟ್ ಹೇಳಿದೆ. ಆದ್ದರಿಂದ ಅರ್ಜಿದಾರರ ವಾದಗಳು ಪುಷ್ಠಿಗೊಳ್ಳದು  ಮತ್ತು ಇದರಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದು ರಾಜ್ಯ ಸರ್ಕಾರಕ್ಕೂ ದೊಡ್ಡ ಹಿನ್ನಡೆಯಾಗಿದೆ.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries