HEALTH TIPS

ಬೆಂಗಳೂರು-ಮಂಗಳೂರು-ಕಾರವಾರ ರೈಲು; ವೇಳಾಪಟ್ಟಿ

             ಬೆಂಗಳೂರು ; ಕರ್ನಾಟಕದಲ್ಲಿ ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ದಕ್ಷಿಣ ರೈಲ್ವೆ ಜನರ ಅನುಕೂಲಕ್ಕಾಗಿ ರೈಲುಗಳ ಸಂಚಾರವನ್ನು ಆರಂಭಿಸಿದೆ.

        ಯಶವಂತಪುರ- ಮಂಗಳೂರು ಜಂಕ್ಷನ್ ಹಾಗೂ ಕಾರವಾರ ಮಾರ್ಗದಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ನಡೆಸಲಿದೆ. ಸಾಮಾನ್ಯ ದರದಲ್ಲಿ ಈ ರೈಲುಗಳಲ್ಲಿ ಜನರು ಸಂಚಾರ ನಡೆಸಬಹುದು ಎಂದು ಪ್ರಕಟಣೆ ತಿಳಿಸಿದೆ.

         ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಈ ಸಂದರ್ಭದಲ್ಲಿ ಈ ರೈಲುಗಳಿಂದ ಬೆಂಗಳೂರು-ಕರಾವಳಿ ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ.

                      ರೈಲುಗಳ ವೇಳಾಪಟ್ಟಿ

* 06557 ನಂಬರ್ ರೈಲು ಏಪ್ರಿಲ್ 13ರಿಂದ ಮಂಗಳವಾರ, ಗುರುವಾರ, ಭಾನುವಾರ ಸಂಚಾರ ನಡೆಸಲಿದೆ. ಯಶವಂತಪುರದಿಂದ ಬೆಳಗ್ಗೆ 7ಕ್ಕೆ ಹೊರಡುವ ರೈಲು ಮಂಗಳೂರು ಜಂಕ್ಷನ್‌ನನ್ನು ಸಂಜೆ 5 ಗಂಟೆಗೆ ತಲುಪಲಿದೆ.

* 06578 ನಂಬರ್ ರೈಲು ಮಂಗಳೂರು ಜಂಕ್ಷನ್‌ನಿಂದ ಬೆಳಗ್ಗೆ 11.30ಕ್ಕೆ ಹೊರಡಲಿದೆ. ರಾತ್ರಿ 8.20ಕ್ಕೆ ಯಶವಂತಪುರ ತಲುಪಲಿದೆ. ಏಪ್ರಿಲ್ 12ರಿಂದ ಬುಧವಾರ, ಶುಕ್ರವಾರ ಮತ್ತು ಸೋಮವಾರ ರೈಲು ಸಂಚಾರ ನಡೆಸಲಿದೆ.

* 06539 ನಂಬರ್ ರೈಲು ಯಶವಂತಪುರದಿಂದ ಬೆಳಗ್ಗೆ 7ಕ್ಕೆ ಹೊರಟು, ಸಂಜೆ 5ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಏಪ್ರಿಲ್ 17ರಿಂದ ಶನಿವಾರ ಈ ರೈಲು ಸಂಚಾರ ನಡೆಸಲಿದೆ.

* 06540 ನಂಬರ್ ರೈಲು ಮಂಗಳೂರು ಜಂಕ್ಷನ್‌ನಿಂದ ಬೆಳಗ್ಗೆ 9.15ಕ್ಕೆ ಹೊರಡಲಿದ್ದು, ರಾತ್ರಿ 8.05ಕ್ಕೆ ಯಶವಂತಪುರಕ್ಕೆ ಆಗಮಿಸಲಿದೆ. ಏಪ್ರಿಲ್ 18ರಿಂದ ಭಾನುವಾರ ಈ ರೈಲು ಓಡಲಿದೆ.

* 06211 ರೈಲು ಯಶವಂತಪುರದಿಂದ ಬೆಳಗ್ಗೆ 7ಕ್ಕೆ ಹೊರಡಲಿದ್ದು ಕಾರವಾರಕ್ಕೆ ರಾತ್ರಿ 8.55ಕ್ಕೆ ತಲುಪಲಿದೆ. ಏಪ್ರಿಲ್ 12ರಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರ ಈ ರೈಲು ಸಂಚಾರ ನಡೆಸಲಿದೆ.

* 06212 ರೈಲು ಕಾರವಾರದಿಂದ ಬೆಳಗ್ಗೆ 5.30ಕ್ಕೆ ಹೊರಡಲಿದ್ದು, ರಾತ್ರಿ 8.20ಕ್ಕೆ ಯಶವಂತಪುರ ತಲುಪಲಿದೆ. ಮಂಗಳವಾರ, ಗುರುವಾರ ಮತ್ತು ಶನಿವಾರ ಈ ರೈಲು ಏಪ್ರಿಲ್ 13ರಿಂದ ಸಂಚಾರ ನಡೆಸಲಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries