HEALTH TIPS

ಕೋವಿಡ್‌: ದೇಶದ ಜನತೆಗೆ ಸಹಾಯ ಮಾಡಲು ಸೇನೆ ಸದಾ ಸಿದ್ಧ -ಬಿಪಿನ್‌ ರಾವತ್‌

            ಬಲಿಯಾ (ಉತ್ತರ ಪ್ರದೇಶ): ಕೋವಿಡ್‌ನಿಂದಾಗಿ ದೇಶದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು ಈ ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ದೇಶದ ಜನರಿಗೆ ಅಗತ್ಯ ನೆರವು ನೀಡಲು ಸೇನೆ ಸಿದ್ಧವಿದೆ ಎಂದು ಸೇನಾಪಡೆಗಳ ಮುಖ್ಯಸ್ಥ ಜ. ಬಿಪಿನ್‌ ರಾವತ್‌ ಹೇಳಿದ್ದಾರೆ.

         ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ಸಾಮಾಜಿಕ ಸಂಘಟನೆಯೊಂದು ಆಯೋಜಿಸಿದ್ದ ವರ್ಚುವಲ್‌ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

       ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಯಲು, ಜನರು ಒಟ್ಟಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ. ಇದಕ್ಕಾಗಿ ಸೇನೆ ಮೂಲಕ ಅಗತ್ಯ ವೈದ್ಯಕೀಯ ಹಾಗೂ ಮೂಲ ಸೌಕರ್ಯಗಳ ನೆರವು ನೀಡಲಾಗುವುದು ಎಂದು ರಾವತ್‌ ಹೇಳಿದ್ದಾರೆ.

       ಕೇಂದ್ರ ಆರೋಗ್ಯ ಸಚಿವಾಲಯದ ದತ್ತಾಂಶದ ಪ್ರಕಾರ, ಭಾರತದಲ್ಲಿ ಭಾನುವಾರ 2.4 ಲಕ್ಷ ಹೊಸ ಕೋವಿಡ್-19 ಪ್ರಕರಣಗಳು ಮತ್ತು 3,741 ಸಾವುಗಳು ದಾಖಲಾಗಿವೆ. ಸೋಂಕಿನಲ್ಲಿ ಇಳಿಕೆ ಕಂಡುಬಂದರೂ ಸಾವಿನ ಪ್ರಮಾಣ ಆತಂಕ ಸೃಷ್ಟಿಸಿದೆ ಎಂದು ಅವರು ಹೇಳಿದರು.

ಭಾರತೀಯ ಸೇನೆ ದೇಶದ ಜನತೆಗೆ ಸಹಾಯ ಮಾಡಲು ಸದಾ ಸಿದ್ಧವಿರುತ್ತದೆ ಎಂದು ರಾವತ್ ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries