HEALTH TIPS

ಕೊರೋನಾ ಚಿಕಿತ್ಸೆಗೆ ರಾಜ್ಯ ಸರ್ಕಾರದಿಂದ ಹೊಸ ಮಾನದಂಡಗಳ ಪ್ರಕಟ: ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೋನಾ ಒಪಿ

                                       

                  ತಿರುವನಂತಪುರ: ರಾಜ್ಯದಲ್ಲಿ ಕೊರೋನಾ ಚಿಕಿತ್ಸೆಗಾಗಿ ಸರ್ಕಾರ ಹೊಸ ಮಾನದಂಡಗಳನ್ನು ಬಿಡುಗಡೆ ಮಾಡಿದೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮೇ 31 ರವರೆಗೆ ಕೊರೋನಾ ಚಿಕಿತ್ಸೆಯತ್ತ ಗಮನ ಹರಿಸಬೇಕೆಂದು ಸೂಚಿಸಲಾಗಿದೆ. ಕೊರೋನಾ ಅಲ್ಲದೆ ಇತರ ಚಿಕಿತ್ಸೆಗಳು ತುರ್ತು ಇದ್ದರೆ ಮಾತ್ರ ನಡೆಸಲು ಸೂಚಿಸಲಾಗಿದೆ. 


            ರಾಜ್ಯ ಎಲ್ಲಾ ಜ್ವರದ ಆಸ್ಪತ್ರೆಗಳೂ ಇನ್ನುಮುಂದೆ ಕೊರೋನಾ ಚಿಕಿತ್ಸಾಲಯಗಳಾಗಿ ಪರಿಗಣಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ತಾಲ್ಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಹಾಸಿಗೆಗಳನ್ನು ಸಜ್ಜುಗೊಳಿಸುವ  ಪ್ರಸ್ತಾಪವೂ ಇದೆ. ಕನಿಷ್ಠ 5 ವೆಂಟಿಲೇಟರ್‍ಗಳನ್ನು ಒಂದೊಂದು ತಾಲೂಕು ಆಸ್ಪತ್ರೆಗಳಲ್ಲೂ ವ್ಯವಸ್ಥೆಗೊಳಿಸಲು ಉದ್ದೇಶಿಸಲಾಗಿದೆ. ಎರಡನೇ ಹಂತದ ಕೊರೋನಾ ಕೇಂದ್ರಗಳನ್ನು ತಾಲ್ಲೂಕು ಆಸ್ಪತ್ರೆಗಳೊಂದಿಗೆ ಸಮೀಕರಿಸಲಾಗುವುದು. ಪ್ರಾಥಮಿಕ ಮತ್ತು ಕುಟುಂಬ ಆರೋಗ್ಯ ಕೇಂದ್ರಗಳಲ್ಲಿ ಸ್ಟೀರಾಯ್ಡ್ ಗಳು ಮತ್ತು ಔಷಧಿಗಳ ಸಂಗ್ರಹವನ್ನು ಖಚಿತಪಡಿಸಿಕೊಳ್ಳಬೇಕು. ಒಳರೋಗಿಗಳಿಗೆ ಮನೆಯಲ್ಲಿ ಆಮ್ಲಜನಕ ಮತ್ತು ಚಿಕಿತ್ಸೆಯನ್ನು ನೀಡಲಾಗುವುದು ಎಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ.

               ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಒಪಿ ಪ್ರಾರಂಭಿಸುವ ಪ್ರಸ್ತಾಪವೂ ಇದೆ. ಕೊರೋನಾ ಹರಡುವಿಕೆಯನ್ನು ನಿಯಂತ್ರಿಸಲು ಲಾಕ್‍ಡೌನ್‍ನ ಪ್ರಯೋಜನಗಳನ್ನು ಒಂದು ವಾರದೊಳಗೆ ತಿಳಿಯಲಾಗುವುದು ಎಂದು ಆರೋಗ್ಯ ಅಧಿಕಾರಿಗಳು ಹೇಳುತ್ತಾರೆ. ಲಾಕ್‍ಡೌನ್ ಕೊರೋನಾ ಪ್ರಕರಣಗಳನ್ನು ಕಡಿಮೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries