HEALTH TIPS

ಜಮ್ಮು: ವೈಷ್ಣೋದೇವಿ ದೇಗುಲದ ಸಂಕೀರ್ಣದಲ್ಲಿ ಬೆಂಕಿ ದುರಂತ, ನಗದು -ದಾಖಲೆ ಭಸ್ಮ

             ಜಮ್ಮು: ಇಲ್ಲಿನ ರಿಯಾಸಿ ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮಾತಾ ವೈಷ್ಣೋದೇವಿ ದೇವಾಲಯ ಸಂಕೀರ್ಣದ ಒಳಗೆ ಇರುವ ಕಟ್ಟಡದಲ್ಲಿ ಮಂಗಳವಾರ ಸಂಜೆ ಬೆಂಕಿ ದುರಂತ ಸಂಭವಿಸಿದೆ.

            ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವಘಡ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಜೆ 4.15 ರ ಸುಮಾರಿಗೆ ಗರ್ಭಗೃಹದ ಪಕ್ಕದಲ್ಲಿರುವ ಕಾಳಿಕಾ ಭವನದ ನಗದು ಎಣಿಕೆಯ ಕೋಣೆಯೊಳಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಸಾವುಗಳು ವರದಿಯಾಗಿಲ್ಲ.

ಬೆಂಕಿಯಿಂದಾಗಿ ಅಪಾರ ಪ್ರಮಾಣದ ನಗದು ಸೇರಿದಂತೆ ದಾಖಲೆಗಳು ಸುಟ್ಟು ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

              'ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ' ಎಂದು ರಿಯಾಸಿ ಜಿಲ್ಲೆಯ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ಶೈಲೇಂದರ್‌ ಸಿಂಗ್ ತಿಳಿಸಿದ್ದಾರೆ.

ಮಾತಾ ವೈಷ್ಣೋದೇವಿ ದೇವಾಲಯ ಸಂಕೀರ್ಣದ ಒಳಗಿನ ಕಟ್ಟಡದಲ್ಲಿ ಮಂಗಳವಾರ ಸಂಜೆ ಬೆಂಕಿ ಕಾಣಿಸಿಕೊಂಡಿರುವ ದೃಶ್ಯ -ಪಿಟಿಐ ಚಿತ್ರ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries