HEALTH TIPS

BREAKING:ಮರುಕಳಿಸಿದ ಇತಿಹಾಸ: ಕೇರಳದಿಂದ ದ.ಕ. ಪ್ರಯಾಣಕ್ಕೆ ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ!:ದ.ಕ.ಡಿ.ಸಿ.

         ಮಂಗಳೂರು: ಕೋವಿಡ್ 
 ಹಿನ್ನೆಲೆಯಲ್ಲಿ ಕಳೆದ ವರ್ಷದ ಒಂದನೇ ಅಲೆಯಲ್ಲಿ ಹೇರಲಾದ ನಿಯಂತ್ರಣಗಳ ಭಾಗವಾಗಿ ಕಾಸರಗೋಡು-ದಕ್ಷಿಣಕನ್ನಡ ಜನರು ಅನುಭವಿಸಿದ ಇತಿಹಾಸ ಮತ್ತೆ ಮರುಕಳಿಸಿದೆ.
       ಕೇರಳದಿಂದ ದಕ್ಷಿಣ ಕನ್ನಡಕ್ಕೆ ಬರಲು ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂಂದ್ರ ಕೆ.ವಿ ಇಂದು ಆದೇಶ ಹೊರಡಿಸಿದ್ದಾರೆ.
       ಈ ಕುರಿತು ಮಾಹಿತಿ ನೀಡಿರುವ ಅವರು, "ಕೇರಳದಲ್ಲಿ ಡೆಲ್ಟಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಪ್ರಕಾರ ಕೇರಳ, ಗಡಿಭಾಗದಿಂದ ಸಂಚರಿಸುವವರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಬರಲು ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರಬೇಕು" ಎಂದಿದ್ದಾರೆ.
       ಗಡಿಗಳಲ್ಲಿಯೂ ತಪಾಸಣೆ ಕ್ರಮಗಳನ್ನು ಬಲಪಡಿಸಲು ಜಿಲ್ಲಾಡಳಿತ ಮುಂದಾಗಿದ್ದು, ತಲಪಾಡಿ, ನೆಟ್ಟಣಿಗೆ ಮುಡ್ನೂರು, ಸಾರಡ್ಕ, ಜಾಲ್ಸೂರು ಗಡಿಗಳಲ್ಲಿ ತಪಾಸಣೆಯನ್ನು ಹೆಚ್ಚಿಸಲಾಗಿದ್ದು, ಈ ನಿಯಮ ನಾಳೆಯಿಂದಲೇ ಜಾರಿಗೊಳಿಸಲಾಗುವುದು ಎಂದು ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
Tags

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries