ಕುಂಬಳೆ: ಕೇರಳದ 2020-21 ನೇ ಸಾಲಿನ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆ ಯ ಫಲಿತಾಂಶವು ಪ್ರಕಟವಾಗಿದ್ದು ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇಕಡಾ ನೂರು ಫಲಿತಾಂಶವನ್ನುವಿದ್ಯಾಲಯವು ಈ ವರ್ಷವೂ ದಾಖಲಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಏಳುಮಂದಿ ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಶ್ರೇಣಿಯಲ್ಲಿ ತೇರ್ಗಡೆಹೊಂದಿರುತ್ತಾರೆ.
ತೇರ್ಗಡೆಯಾದ ಎಲ್ಲಾ ಮಕ್ಕಳನ್ನು ಆಡಳಿತ ಸೇವಾ ಸಮಿತಿ, ಆಡಳಿತಾಧಿಕಾರಿ ಶ್ಯಾಂಭಟ್ ದರ್ಭೆಮಾರ್ಗ, ಮುಖ್ಯ ಶಿಕ್ಷಕಿ ಚಿತ್ರಾಸರಸ್ವತಿ ಹಾಗೂ ಅಧ್ಯಾಪಕ ವೃಂದ, ರಕ್ಷಕ ಶಿಕ್ಷಕ ಸಂಘ ಅಭಿನಂದನಂದಿಸಿದೆ.





