ಕಾಸರಗೋಡು: ಶ್ರೀಮದ್ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳ ಪ್ರಥಮ ಚಾತುರ್ಮಾಸ್ಯ ಉತ್ಸವ ಇಂದಿನಿಂದ (ಜು.24) ಸೆ.20. ರ ವರೆಗೆ ಶ್ರೀಮದ್ ಎಡನೀರು ಮಠದಲ್ಲಿ ನಡೆಯಲಿದೆ.
ಆ.26 ರಂದು ಬ್ರಹ್ಮೈಕ್ಯ ಶ್ರೀಕೇಶವಾನಂದ ಭಾರತೀ ಶ್ರೀಗಳ ಆರಾಧನಾ ಮಹೋತ್ಸವ ಜರಗಲಿದೆ. ವ್ರತಾನುಷ್ಠಾನದ ಅಂಗವಾಗಿ ವಿವಿಧ ದಿನಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳೂ ನಡೆಯಲಿದೆ. ಇಂದು ಸಂಜೆ ಸಂಜೆ 5.30ಕ್ಕೆ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಸದ ರಾಜಮೋಹನ ಉಣ್ಣಿತ್ತಾನ್ ಅ|ಧ್ಯಕ್ಷತೆ ವಹಿಸುವರು. ಕರ್ನಾಟಕ ಸರ್ಕಾರದ ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ ಉದ್ಘಾಟಿಸುವರು. ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು, ಉದುಮ ಶಾಸಕ ನ್ಯಾಯವಾದಿ ಸಿ.ಎಚ್.ಕುಂಞಂಬು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಬಳಿಕ ಸುರತ್ಕಲ್ಲಿನ ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ ತಂಡದಿಂದ ಭರತನಾಟ್ಯ ಮತ್ತು ದಶಾವತಾರ ನೃತ್ಯ ರೂಪಕ ಪ್ರದರ್ಶನ 6.30 ರಿಂದ ಆಯೋಜಿಸಲಾಗಿದೆ.
ಚಾತುರ್ಮಾಸ್ಯ ವ್ರತಾಚರಣೆಯ ಅಂಗವಾಗಿ ಜು.26 ರಿಂದ ಆ.1ರ ವರೆಗೆ ಉಜಿರೆಯ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕøತಿಕ ಪ್ರತಿಷ್ಠಾನದ ನೇತೃತ್ವದಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ ನಡೆಯಲಿದೆ.
ಕೊಂಡೆವೂರು ಶ್ರೀನಿತ್ಯಾನಂದ ಸೇವಾಶ್ರಮದ ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿಯವರ 18ನೇ ವರ್ಷದ ಚಾತುರ್ಮಾಸ್ಯ ವ್ರತಾನುಷ್ಠಾನ ಕೊಂಡೆವೂರು ಆಶ್ರಮದಲ್ಲಿ ಇಂದಿನಿಂದ ಆರಂಭಗೊಳ್ಳಲಿದೆ. ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ನೆರವೇರಲಿದೆ.