HEALTH TIPS

ಕರೊನಾ ಗೆದ್ದವರಿಗೆ ಕ್ಷಯರೋಗದ ಆತಂಕ? ಎಲ್ಲರೂ ಟಿಬಿ ಟೆಸ್ಟ್ ಮಾಡಿಸಿಕೊಳ್ಳಿ ಎಂದ ಆರೋಗ್ಯ ಇಲಾಖೆ

          ನವದೆಹಲಿ: ಭಾರತದಲ್ಲಿ ಕರೊನಾ ಎರಡನೇ ಅಲೆಯ ಅಬ್ಬರ ಕಡಿಮೆಯಾಗುತ್ತಿದೆ. ಆದರೆ ಕರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸುತ್ತಿರುವುದು ಆತಂಕ ಹುಟ್ಟಿಸಿದೆ. ಅದರಲ್ಲೂ ಸೋಂಕು ಗೆದ್ದ ಅನೇಕರಲ್ಲಿ ಕ್ಷಯ ರೋಗ ಕಾಣಿಸಿಕೊಂಡಿದೆ ಎನ್ನುವ ವರದಿ ಬಿತ್ತರವಾಗಿದ್ದು, ದೇಶದ ಜನರು ಭಯಪಡುವಂತಾಗಿದೆ.

            ಈ ಕುರಿತಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಕರೊನಾ ಸೋಂಕಿಗೆ ತುತ್ತಾಗಿ ಗುಣಮುಖರಾದವರೆಲ್ಲರೂ ಕ್ಷಯ ರೋಗದ ಪರೀಕ್ಷೆ ಮಾಡಿಸಿಕೊಳ್ಳಿ. ಹಾಗೂ ಈಗಾಗಲೇ ಕ್ಷಯ ರೋಗದಿಂದ ಬಳಲುತ್ತಿರುವವರು ಕರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದೆ.

           ಅದಾಗ್ಯೂ, ಕರೊನಾ ಮತ್ತು ಕ್ಷಯ ರೋಗದ ನಡುವೆ ನೇರ ಸಂಬಂಧ ಇರುವುದಕ್ಕೆ ಇದುವರೆಗೆ ಯಾವುದೇ ಪುರಾವೆ ಲಭಿಸಿಲ್ಲ. ಮುನ್ನೆಚ್ಚರಿಕೆಯಾಗಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಚಿವಾಲಯ ಹೇಳಿದೆ. ಈ ಎರಡೂ ರೋಗಗಳು ಶ್ವಾಸಕೋಶಕ್ಕೆ ಸಂಬಂಧ ಪಟ್ಟಿರುವುದಾಗಿರುವುರಿಂದ ಪರಿಣಾಮ ಉಂಟಾಗುವ ಸಾಧ್ಯತೆ ಇದ್ದರೂ ಇರಬಹುದು ಎನ್ನಲಾಗಿದೆ. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries