HEALTH TIPS

ಗೋಹತ್ಯೆ, ಗೋಮಾಂಸ ಸೇವನೆಗೆ ಕಡಿವಾಣ: ಅಸ್ಸಾಂನಲ್ಲಿ ಮಸೂದೆ ಮಂಡನೆ

           ಗುವಾಹಟಿರಾಜ್ಯದಲ್ಲಿ ಹಿಂದೂ, ಜೈನರು, ಸಿಖ್ಖರು ಮತ್ತು ಗೋಮಾಂಸ ಸೇವಿಸದ ಇತರೆ ಸಮುದಾಯದವರು ಪ್ರಾಬಲ್ಯ ಹೊಂದಿರುವ ಪ್ರದೇಶಗಳಲ್ಲಿ ಗೋಮಾಂಸ ಮಾರಾಟ ನಿಷೇಧಿಸಲು ಅಸ್ಸಾಂನ ಬಿಜೆಪಿ ಸರ್ಕಾರ ಉದ್ದೇಶಿಸಿದೆ.

         ಈ ಸಂಬಂಧ 'ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆ 2021'ಯ ಮಸೂದೆಯನ್ನು ಸರ್ಕಾರ ಮಂಡಿಸಿದೆ. ಅದರ ಪ್ರಕಾರ ದೇಗುಲ ಸೇರಿ ಹಿಂದೂ ಧಾರ್ಮಿಕ ಸಂಸ್ಥೆಗಳ 5 ಕಿ.ಮೀ. ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟವನ್ನು ನಿರ್ಬಂಧಿಸಲಾಗುತ್ತದೆ.

             ಅಸ್ಸಾಂ ಸರ್ಕಾರದ ಅನುಮತಿಯಿಲ್ಲದೇ ನೆರೆಯ ರಾಜ್ಯಗಳಿಂದ ರಾಜ್ಯಕ್ಕೆ ಗೋಮಾಂಸ ಸಾಗಣೆಯನ್ನೂ ನಿರ್ಬಂಧಿಸಲು ಮಸೂದೆ ಅವಕಾಶ ನೀಡಲಿದೆ. ಇದು ನೆರೆಯ ಮಿಜೋರಾಂ, ನಾಗಾಲ್ಯಾಂಡ್‌, ಮೇಘಾಲಯಗಳಿಗೆ ಇರಿಸುಮುರಿಸು ತಂದಿದೆ.

        ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮಸೂದೆಯನ್ನು ಮಂಡಿಸಿದರು. ಗೋಹತ್ಯೆ, ಗೋಮಾಂಸ ಸೇವನೆ, ಸಾಗಣೆ ಪ್ರಕರಣದಲ್ಲಿ ಕಟ್ಟುನಿಟ್ಟಿನ ಕ್ರಮಗಳಿಗೆ ಅವಕಾಶ ಇರದಿದ್ದ ಹಾಲಿ 1950ರ ಕಾಯ್ದೆ ಬದಲು ಹೊಸ ಕಾಯ್ದೆ ತರುವುದು ಉದ್ದೇಶ.

            ಹಾಲಿ ಕಾಯ್ದೆಯಡಿ, 14 ವರ್ಷ ಮೀರಿದ ಜಾನುವಾರುಗಳ ಹತ್ಯೆಗೆ ಅವಕಾಶವಿತ್ತು. ಉದ್ದೇಶಿತ ಮಸೂದೆಯು ಲೈಸೆನ್ಸ್‌ ಹೊಂದಿರುವ ಕಸಾಯಿಖಾನೆಗಳಲ್ಲಿಯಷ್ಟೇ ಗೋಹತ್ಯೆಗೆ ಅವಕಾಶ ನೀಡಿದೆ. ನಿಯಮಗಳ ಉಲ್ಲಂಘನೆ ಸಾಬೀತಾದಲ್ಲಿ 3 ರಿಂದ 5 ವರ್ಷ ಸಜೆ ಮತ್ತು ₹ 3ಲಕ್ಷದಿಂದ ₹ 5 ಲಕ್ಷವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries