HEALTH TIPS

ರವಿಶಂಕರ್ ಪ್ರಸಾದ್ ತಮಿಳುನಾಡು ನೂತನ ರಾಜ್ಯಪಾಲ?

             ನವದೆಹಲಿತಮಿಳುನಾಡಿನ ರಾಜ್ಯಪಾಲರನ್ನಾಗಿ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ನೇಮಿಸಲಾಗುತ್ತಿದೆ ಎಂದು ವರದಿಯಾಗಿದೆ.

            ಕೇಂದ್ರ ಮಾಹಿತಿ ತಂತ್ರಜ್ಞಾನ ಹಾಗೂ ನ್ಯಾಯ ಖಾತೆ ಸಚಿವರಾಗಿದ್ದ ಅವರು ಇತ್ತೀಚಿನ ನಡೆದ ಸಂಪುಟ ವಿಸ್ತರಣೆಗೆ ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಿಸಲು ನಿರ್ಧರಿಸಿದೆ.

             ಪ್ರಸ್ತುತ ಭನ್ವರಿಲಾಲ್ ಪುರೋಹಿತ್ ತಮಿಳುನಾಡು ರಾಜ್ಯಪಾಲರಾಗಿದ್ದಾರೆ. ಬಿಜೆಪಿ ಕೇಂದ್ರ ನಾಯಕರ      ಸೂಚನೆಯಂತೆ ಅವರು ಶನಿವಾರ ದೆಹಲಿಗೆ ತೆರಳಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

               ಈ ಕ್ರಮವಾಗಿ ರವಿಶಂಕರ್ ಪ್ರಸಾದ್ ಅವರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries