ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಕರ್ತರ ಸಮ್ಮಿಲನ ಹಾಗೂ ಹಿರಿಯ ಪತ್ರಕರ್ತರಿಗೆ ಗೌರವಾರ್ಪನೆ ಸಮಾರಂಭ ನಾಳೆ(ಸೋಮವಾರ) ಬೆಳಿಗ್ಗೆ 11 ರಿಂದ ಕಾಸರಗೋಡು ತಾಳಿಪಡ್ಪಿನ ಉಡುಪಿ ಗಾರ್ಡನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭವನ್ನು ಕರ್ನಾಟಕದ ಮಾಜಿ ಮುಖ್ಯ ಸಚೇತಕ ಕ್ಯಾ.ಗಣೇಶ್ ಕಾರ್ಣಿಕ್ ಉದ್ಘಾಟಿಸುವರು. ಕ.ಸಾ.ಪ. ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ರಾಜ್ಯಾಧ್ಯಕ್ಷ ಕಾಸರಗೋಡು ಚಿನ್ನಾ, ಅಂಕಣಕಾರ ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಈ ಸಂದರ್ಭ ಹಿರಿಯ ಪತ್ರಕರ್ತ, ಉದಯವಾಣಿ ದೈನಿಕದ ಜಿಲ್ಲಾ ವರದಿಗಾರ ಪ್ರದೀಪ್ ಕುಮಾರ್ ಬೇಕಲ್ ಹಾಗೂ ಹಿರಿಯ ವರದಿಗಾರ ಅಚ್ಯುತ ಚೇವಾರ್ ಅವರನ್ನು ಅ|ಭಿನಂದಿಸಿ ಸನ್ಮಾನಿಸಲಾಗುವುದು. ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಸದಸ್ಯರು ಭಾಗವಹಿಸುವರು.