HEALTH TIPS

ಟಿಟಿಡಿ ಮಂಡಳಿಯ ಅಧ್ಯಕ್ಷರಾಗಿ ವೈ.ವಿ ಸುಬ್ಬಾರೆಡ್ಡಿ ಮರುನೇಮಕ

            ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರ ಸಂಬಂಧಿ ವೈ. ವಿ ಸುಬ್ಬಾರೆಡ್ಡಿ ಅವರನ್ನು ತಿರುಪತಿ ತಿರುಮಲ ದೇಗುಲದ ಆಡಳಿತ ಮಂಡಳಿಯ(ಟಿಟಿಡಿ) ಅಧ್ಯಕ್ಷರಾಗಿ ಭಾನುವಾರ ಮರು ನೇಮಕ ಮಾಡಲಾಗಿದೆ.

           ಈ ಸಂಬಂಧ ಪ್ರಧಾನ ಕಾರ್ಯದರ್ಶಿ (ಕಂದಾಯ-ದತ್ತಿಗಳು) ಜಿ. ವಾಣಿ ಮೋಹನ್ ಅವರು ಆದೇಶ ಹೊರಡಿಸಿದ್ದಾರೆ. ಮಂಡಳಿಯ ಇತರ ಸದಸ್ಯರನ್ನು ಆದಷ್ಟು ಬೇಗ ಆಯ್ಕೆ ಮಾಡಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ.

           ಮಾಜಿ ಸಂಸದ ಸುಬ್ಬಾ ರೆಡ್ಡಿ ಅವರು ಈ ವರ್ಷ ಜೂನ್‌ಗೆ ಕೊನೆಗೊಂಡಂತೆ ಎರಡು ವರ್ಷಗಳ ಅವಧಿಗೆ ಟಿಟಿಡಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

         ಸುಬ್ಬಾರೆಡ್ಡಿ ಅವರನ್ನು ಆಂಧ್ರಪ್ರದೇಶದ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲಾಗುವುದು ಎಂಬ ಮಾತುಗಳು ಕೇಳಿ ಬಂದಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries