HEALTH TIPS

ತಲಪಾಡಿ ಗಡಿಯಲ್ಲಿ ಮುಂದುವರಿದ ಪ್ರತಿಭಟನೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ರದ್ದು

    

                  ಮಂಜೇಶ್ವರ: ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ ಕೋವಿಡ್ ನೆಗೆಟಿವ್ ಟೆಸ್ಟ್ ಕಡ್ಡಾಯಗೊಳಿಸಿ ಗಡಿಗಳನ್ನು ಮುಚ್ಚಿದ ಕರ್ನಾಟಕ ಸರ್ಕಾರದ ಆದೇಶದ ವಿರುದ್ಧ ತಲಪಾಡಿ ಗಡಿಯಲ್ಲಿ  ಪ್ರತಿಭಟನೆಗಳು ಮುಂದುವರಿದಿದ್ದು ಶುಕ್ರವಾರ ಕೂಡ ಮಂಜೇಶ್ವರ ಪಂಚಾಯತಿ ಯುಡಿಎಫ್ ಸಮಿತಿಯ ನೇತೃತ್ವದಲ್ಲಿ ಕಪ್ಪು ಮಾಸ್ಕ್ ಧರಿಸಿ ಪ್ರತಿಭಟನೆ ನಡೆಯಿತು. 

              ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ತಲಪಾಡಿ ಗಡಿ ಪ್ರದೇಶಕ್ಕೆ ಭೇಟಿ ನೀಡುವ ಮಾಹಿತಿಯಂತೆ ಕೇರಳ ಭಾಗದಲ್ಲಿ ಪ್ರತಿಭಟನೆ ಸಜ್ಜುಗೊಂಡಿತ್ತು. ಪ್ರತಿಭಟನೆಯ ಮಾಹಿತಿ ಅರಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಲಪಾಡಿ ಸಂದರ್ಶನವನ್ನು ರದ್ದುಗೊಳಿಸಿದ್ದರು. ತಲಪಾಡಿ ಗಡಿ ತಲುಪಿದ ಯುಡಿವೈಎಫ್ ಕಾರ್ಯಕರ್ತರು ಸಾಂಕೇತಿಕ ಪ್ರತಿಭಟನೆಯನ್ನು ನಡೆಸಿ,  ಎರಡು ಡೋಸ್ ವ್ಯಾಕ್ಸಿನ್ ಪಡೆದುಕೊಂಡವರಿಗೆ ಕೇಂದ್ರ ಸರ್ಕಾರದ ಆದೇಶದಂತೆ ಕರ್ನಾಟಕ ಪ್ರವೇಶಿಸಲು ಅನುಮತಿ ನೀಡಬೇಕೆಂದು ಹಕ್ಕೊತ್ತಾಯ ಮಂಡಿಸಿದರು. 

               ಪ್ರತಿಭಟನೆಯಲ್ಲಿ ನೇತಾರರಾದ ಹರ್ಷಾದ್ ವರ್ಕಾಡಿ, ಸೈಫುಲ್ಲಾ ತಂಙಳ್, ಸಿದ್ದೀಕ್ ಮಂಜೇಶ್ವರ, ಮುಸ್ತಫಾ ಉದ್ಯಾವರ, ಇಲ್ಯಾಸ್ ತೂಮಿನಾಡು, ಅಬ್ದುಲ್ಲತೀಫ್  ಬಾಬ, ಪುತ್ತುಚ, ಮುಬಾರಕ್ ಗುಡ್ಡೆಕೇರಿ, ರಿಯಾಜ್ ಮುಂತಾದವರು ನೇತೃತ್ವ ನೀಡಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries