HEALTH TIPS

ಕೇರಳ: 'ವರದಕ್ಷಿಣೆ ವಿರೋಧಿ ಸಹಾಯ ಕೇಂದ್ರ' ಆರಂಭಿಸಿದ ವಿಪಕ್ಷ ನಾಯಕ

               ತಿರುವನಂತಪುರ: ರಾಜ್ಯದಲ್ಲಿ ವರದಕ್ಷಿಣೆ ಕಿರುಕುಳದ ಪ್ರಕರಣಗಳು ಹೆಚ್ಚುತ್ತಿರುವ ಆತಂಕದ ನಡುವೆ, ಈ ದೌರ್ಜನ್ಯದಿಂದ ಸಂಕಷ್ಟಕ್ಕೊಳಗಾಗಿರುವ ಮಹಿಳೆಯರಿಗೆ ನೆರವು ನೀಡುವ ಸಲುವಾಗಿ ವಿಧಾನಸಭೆ ವಿರೋಧಪಕ್ಷದ ನಾಯಕ ವಿ.ಡಿ.ಸತೀಶನ್ ಅವರು, ತಮ್ಮ ಕಚೇರಿಯಲ್ಲಿ 'ವರದಕ್ಷಿಣೆ ವಿರೋಧಿ ಸಹಾಯ ಕೇಂದ್ರ'ವನ್ನು ಆರಂಭಿಸಿದ್ದಾರೆ.

           ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕವಾಗಿ ನೊಂದ ಮಹಿಳೆಯರು ಕೇಂದ್ರವನ್ನು ಸಂಪರ್ಕಿಸಲು ಶುಲ್ಕ ರಹಿತ ದೂರವಾಣಿ ಸಂಖ್ಯೆ ನೀಡಲಾಗಿದೆ. ಈ ದೂರವಾಣಿ ಸಂಖ್ಯೆ ಮೂಲಕ ಕೇಂದ್ರವನ್ನು ಸಂಪರ್ಕಿಸಿ, ಉಚಿತವಾಗಿ ಕಾನೂನು ನೆರವು ಪಡೆಯಬಹುದು.

         ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಮತ್ತು ಖ್ಯಾತ ಹಿನ್ನೆಲೆ ಗಾಯಕಿ ಅಪರ್ಣಾ ರಾಜೀವ್ ಅವರು ಜಂಟಿಯಾಗಿ 'ವರದಕ್ಷಿಣೆ ವಿರೋಧಿ ಸಹಾಯ ಕೇಂದ್ರ'ವನ್ನು ಉದ್ಘಾಟಿಸಿದರು.

          ಉದ್ಘಾಟನೆ ನಂತರ ಮಾತನಾಡಿದ ಸತೀಶನ್, 'ಸಂತ್ರಸ್ತ ಮಹಿಳೆಯರಿಗೆ ಕಾನೂನು ನೆರವು ನೀಡುವ ಸಲುವಾಗಿ 87 ವಕೀಲರನ್ನು ನಿಯೋಜಿಸಲಾಗಿದೆ' ಎಂದು ತಿಳಿಸಿದರು.

          ಇದೇ ರೀತಿಯ ಸಹಾಯ ಕೇಂದ್ರಗಳನ್ನು ತೆರೆಯುವಂತೆ ಅವರು ವಿವಿಧ ಸಂಘ-ಸಂಸ್ಥೆಗಳಿಗೆ ಒತ್ತಾಯಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries