ಮಂಜೇಶ್ವರ: ತಲಪಾಡಿ ಗಡಿಯಲ್ಲಿರುವ ಆರ್.ಟಿ.ಒ. ಚೆಕ್ ಪೋಸ್ಟ್ ಗೆ ವಿಜಿಲೆನ್ಸ್ ತಂಡ ಮಿಂಚಿನ ದಾಳಿ ನಡೆಸಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಲಂಚ ಸ್ವೀಕಾರ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ.
ವಿಜಿಲೆನ್ಸ್ ತಂಡ ಸುಮಾರು 16,900 ರೂ. ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಲಂಚ ಪಡೆಯುತ್ತಿದ್ದಾರೆ ಎಂಬ ಮಾಹಿತಿಯಂತೆ ವಿಜಿಲೆನ್ಸ್ ತಂಡ ದಾಳಿ ನಡೆಸಿದೆ.
ಕಲೆಕ್ಷನ್ ಏಜೆಂಟ್ ಮೂಲಕ ವಾಹನ ಚಾಲಕರಿಂದ ಲಂಚ ಪಡೆಯುತ್ತಿದ್ದರು ಎಂದು ವಿಜಲೆನ್ಸ್ ತನಿಖೆಯಿಂದ ತಿಳಿದು ಬಂದಿದೆ. ವಿಜಿಲೆನ್ಸ್ ಇನ್ಸ್ ಪೆಕ್ಟರ್ ಕೆ. ರಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.