ತಿರುವನಂತಪುರಂ: ರಾಜ್ಯದಲ್ಲಿ ಇಂದು 19,682 ಮಂದಿ ಜನರಿಗೆ ಕೋವಿಡ್ ದೃಢಪಟ್ಟಿದೆ. ತ್ರಿಶೂರ್ 3033, ಎರ್ನಾಕುಳಂ 2564, ಕೋಝಿಕ್ಕೋಡ್ 1735, ತಿರುವನಂತಪುರ 1734, ಕೊಲ್ಲಂ 1593, ಕೊಟ್ಟಾಯಂ 1545, ಮಲಪ್ಪುರಂ 1401, ಪಾಲಕ್ಕಾಡ್ 1378, ಅಲಪ್ಪುಳ 1254, ಕಣ್ಣೂರು 924, ಪತ್ತನಂತಿಟ್ಟ 880, ಇಡುಕ್ಕಿ 734, ವಯನಾಡ್ 631 ಮತ್ತು ಕಾಸರಗೋಡು 276 ಎಂಬಂತೆ ಸೋಂಕು ಪತ್ತೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1,21,945 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕು ಜನಸಂಖ್ಯೆ ಅನುಪಾತ 10 ಕ್ಕಿಂತ ಮೇಲೆ 422 ಸ್ಥಳೀಯ ಸಂಸ್ಥೆಗಳಲ್ಲಿ 841 ವಾರ್ಡ್ಗಳನ್ನು ಒಳಗೊಂಡಿದೆ. ಇಲ್ಲಿ ಕಠಿಣ ನಿಯಂತ್ರಣ ಇರುತ್ತದೆ.
ಪ್ರಸ್ತುತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 4,75,103 ಮಂದಿ ಜನರು ಕಣ್ಗಾವಲಿನಲ್ಲಿ ಇದ್ದಾರೆ. ಈ ಪೈಕಿ 4,52,282 ಮಂದಿ ಮನೆ / ಸಾಂಸ್ಥಿಕ ಕ್ವಾರಂಟೈನ್ ಮತ್ತು 2,28,821 ಮಂದಿ ಆಸ್ಪತ್ರೆ ಮೇಲ್ವಿಚಾರಣೆಯಲ್ಲಿದ್ದಾರೆ. 1689 ಮಂದಿ ಜನರನ್ನು ಹೊಸದಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಪ್ರಸ್ತುತ, 1,60,046 ಕೋವಿಡ್ ಪ್ರಕರಣಗಳಲ್ಲಿ, ಕೇವಲ 13 ಪ್ರತಿಶತದಷ್ಟು ಜನರು ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ 152 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 24,191 ಕ್ಕೆ ಏ|ರಿಕೆಯಾಗಿದೆ.
ಇಂದು, ಕೋವಿಡ್ ನಿಂದ ಬಳಲುತ್ತಿರುವವರಲ್ಲಿ 53 ಮಂದಿ ಹೊರ ರಾಜ್ಯದಿಂದ ಬಂದವರು. 18,784 ಮಂದಿ ಜನರು ಸಂಪರ್ಕದ ಮೂಲಕ ಸೋಂಕಿಗೆ ಒಳಗಾಗಿದ್ದಾರೆ. 737 ಮಂದಿಯ ಸಂಪರ್ಕ ಮೂಲಗಳು ಸ್ಪಷ್ಟವಾಗಿಲ್ಲ. 108 ಮಂದಿ ಆರೋಗ್ಯ ಕಾರ್ಯಕರ್ತರು ಕೋವಿಡ್ ಗೆ ಒಳಗಾಗಿದ್ದಾರೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ ಒಟ್ಟು 20,510 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 1455, ಕೊಲ್ಲಂ 1353, ಪತ್ತನಂತಿಟ್ಟ 1202, ಆಲಪ್ಪುಳ 1293, ಕೊಟ್ಟಾಯಂ 1667, ಇಡುಕ್ಕಿ 1238, ಎರ್ನಾಕುಳಂ 2814, ತ್ರಿಶೂರ್ 2455, ಪಾಲಕ್ಕಾಡ್ 1467, ಮಲಪ್ಪುರಂ 1591, ಕೋಝಿಕ್ಕೋಡ್ 2050, ವಯನಾಡ್ 594, ಕಣ್ಣೂರು 1142 ಮತ್ತು ಕಾಸರಗೋಡು 189 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ, 1,60,046 ಮಂದಿ ಜನರಿಗೆ ಸೋಂಕು ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ 43,94,476 ಮಂದಿ ಜನರನ್ನು ಕೋವಿಡ್ನಿಂದ ಬಿಡುಗಡೆ ಮಾಡಲಾಗಿದೆ.





