ತಿರುವನಂತಪುರಂ: ರಾಜ್ಯದಲ್ಲಿ ಇಂದು 22,182 ಮಂದಿ ಜನರಿಗೆ ಕೋವಿಡ್ ದೃಢಪಟ್ಟಿದೆ. ತ್ರಿಶೂರ್ 3252, ಎರ್ನಾಕುಳಂ 2901, ತಿರುವನಂತಪುರ 2135, ಮಲಪ್ಪುರಂ 2061, ಕೋಝಿಕ್ಕೋಡ್ 1792, ಪಾಲಕ್ಕಾಡ್ 1613, ಕೊಲ್ಲಂ 1520, ಅಲಪ್ಪುಳ 1442, ಕಣ್ಣೂರು 1246, ಕೊಟ್ಟಾಯಂ 1212, ಪತ್ತನಂತಿಟ್ಟ 1015, ಇಡುಕ್ಕಿ 973, ವಯನಾಡ್ 740 ಮತ್ತು ಕಾಸರಗೋಡು 280 ಎಂಬಂತೆ ಕೋವಿಡ್ ದೃಢಪಡಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 1,21,486 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕಿನ ಜನಸಂಖ್ಯೆಯ ಅನುಪಾತ ಎಂಟಕ್ಕಿಂತ ಹೆಚ್ಚಿನ 678 ಸ್ಥಳೀಯ ಸಂಸ್ಥೆಗಳಲ್ಲಿ 2507 ವಾರ್ಡ್ಗಳಿವೆ. ಇಲ್ಲಿ ಕಠಿಣ ನಿಯಂತ್ರಣ ಇರುತ್ತದೆ.
ಪ್ರಸ್ತುತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 5,54,807 ಮಂದಿ ಜನರು ಕಣ್ಗಾವಲಿನಲ್ಲಿ ಇದ್ದಾರೆ. ಈ ಪೈಕಿ 5,27,791 ಮಂದಿ ಮನೆ / ಸಾಂಸ್ಥಿಕ ಕ್ವಾರಂಟೈನ್ ಮತ್ತು 27,016 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. 1881 ಮಂದಿ ಜನರು ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಸ್ತುತ, 1,86,190 ಕೋವಿಡ್ ಪ್ರಕರಣಗಳಲ್ಲಿ, ಕೇವಲ 13.4 ಪ್ರತಿಶತದಷ್ಟು ಜನರು ಮಾತ್ರ ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಇಂದು, ಕೋವಿಡ್ ಬಾಧಿಸಿ 178 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 23,165 ಕ್ಕೆ ಏರಿಕೆಯಾಗಿದೆ.
ಇಂದು, ರೋಗ ಪತ್ತೆಯಾದವರಲ್ಲಿ 89 ಮಂದಿ ಜನರು ರಾಜ್ಯದ ಹೊರಗಿಂದ ಬಂದವರು. 21,122 ಮಂದಿ ಜನರು ಸಂಪರ್ಕದ ಮೂಲಕ ಸೋಂಕಿಗೆ ಒಳಗಾಗಿದ್ದಾರೆ. 866 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. 105 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ದೃಢ|ಪಡಿಸಲಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ ಒಟ್ಟು ಮಂದಿ 26,563 ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 2446, ಕೊಲ್ಲಂ 2159, ಪತ್ತನಂತಿಟ್ಟ 981, ಅಲಪ್ಪುಳ 1425, ಕೊಟ್ಟಾಯಂ 1831, ಇಡುಕ್ಕಿ 987, ಎರ್ನಾಕುಳಂ 3362, ತ್ರಿಶೂರ್ 2992, ಪಾಲಕ್ಕಾಡ್ 1913, ಮಲಪ್ಪುರಂ 2878, ಕೋಝಿಕ್ಕೋಡ್ 2930, ವಯನಾಡ್ 835, ಕಣ್ಣೂರು 1506 ಮತ್ತು ಕಾಸರಗೋಡು 318 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ, 1,86,190 ಮಂದಿ ಜನರಿಗೆ ಕೋವಿಡ್ ಇರುವುದು ಪತ್ತೆಯಾಗಿದ್ದು, ಅವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ 42,36,309 ಮಂದಿ ಜನರನ್ನು ಕೋವಿಡ್ನಿಂದ ಮುಕ್ತಗೊಳಿಸಲಾಗಿದೆ.


