HEALTH TIPS

ವಿಷಲ್‌ಬ್ಲೋಯಿಂಗ್: ಜಾಗೃತಿ ಮೂಡಿಸಲು ಸಿವಿಸಿ ಸೂಚನೆ

              ನವದೆಹಲಿ: ವಿವಿಧ ಇಲಾಖೆಗಳಲ್ಲಿ ನಡೆಯುವ ಭ್ರಷ್ಟಾಚಾರವನ್ನು ಬಯಲಿಗೆಳೆಯುವ ಕಾರ್ಯ (ವಿಷಲ್‌ಬ್ಲೋಯಿಂಗ್) ಕುರಿತು ಜನರಲ್ಲಿ ಜಾಗೃತಿ ಮೂಡಿಸಿ, ಅವರನ್ನು ಸಂವೇದನಾಶೀಲರನ್ನಾಗಿ ಮಾಡಬೇಕು ಎಂದು ಕೇಂದ್ರೀಯ ವಿಚಕ್ಷಣಾ ಆಯೋಗ (ಸಿವಿಸಿ) ಎಲ್ಲ ಇಲಾಖೆಗಳಿಗೆ ಸೂಚಿಸಿದೆ.

             ಮುಂದಿನ ತಿಂಗಳ ಮೊದಲ ವಾರ 'ಜಾಗೃತಿ ಸಪ್ತಾಹ' ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸಿವಿಸಿ ಈ ಸೂಚನೆ ನೀಡಿದೆ.

           ಗ್ರಾಹಕ ಕೇಂದ್ರಿತ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಗ್ರಾಹಕರ ವ್ಯಾಜ್ಯಗಳನ್ನು ಪರಿಹರಿಸಲು ಶಿಬಿರಗಳನ್ನು ಆಯೋಜಿಸಬೇಕು ಎಂದು ಬುಧವಾರ ಹೊರಡಿಸಿರುವ ಆದೇಶದಲ್ಲಿ ಸಿವಿಸಿ ತಿಳಿಸಿದೆ.

              ಭ್ರಷ್ಟಾಚಾರದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸುವುದು ಅಗತ್ಯ. ಇದಕ್ಕಾಗಿ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ 'ಜಾಗೃತಿ ಗ್ರಾಮಸಭೆ'ಗಳನ್ನು ಸಂಘಟಿಸಬೇಕು ಎಂದೂ ಆಯೋಗ ಸೂಚಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries