HEALTH TIPS

ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆಯ ಕ್ರಮೀಕರಣ: ಆರೋಗ್ಯ ಸಚಿವೆ ವೀಣಾ ಜಾರ್ಜ್

                                                          

                   ತಿರುವನಂತಪುರಂ: ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆಯನ್ನು ಕ್ರಮೀಕರಿಸಲಾಗುವುದು ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಕೊರೋನಾ ಸಾವಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಗಳು ಮತ್ತು ಸುಪ್ರೀಂ ಕೋರ್ಟ್ ಆದೇಶದ ಆಧಾರದ ಮೇಲೆ ಸಾವಿನ ಸಂಖ್ಯೆಯನ್ನು ನವೀಕರಿಸಲಾಗುತ್ತದೆ.

                 ಕೇಂದ್ರ ಸರ್ಕಾರದ ಪರಿಷ್ಕøತ ಮಾರ್ಗಸೂಚಿಯು ಕೋವಿಡ್ ಬಾಧಿಸಿ 30 ದಿನಗಳೊಳಗೆ ಒಬ್ಬ ವ್ಯಕ್ತಿಯು  ಸಾವನ್ನಪ್ಪಿದರೆ, ಅದನ್ನು ಕೊರೋನ ಸಾವು ಎಂದು ಪರಿಗಣಿಸಲಾಗುತ್ತದೆ ಎಂದು ಹೇಳುತ್ತದೆ. ಕೊರೋನಾ ಸಂತ್ರಸ್ತರು ಆತ್ಮಹತ್ಯೆ ಮಾಡಿಕೊಂಡರೂ ಅವರನ್ನು ಪಟ್ಟಿಯಲ್ಲಿ ಸೇರಿಸಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ಮಾರ್ಗಸೂಚಿಗಳನ್ನು ಪರಿಷ್ಕರಿಸಲಾಗುವುದು ಎಂದು ವೀಣಾ ಜಾರ್ಜ್ ಹೇಳಿದರು.

                   ಕೊರೊನಾ ಮೂರನೇ ತರಂಗವನ್ನು ಎದುರಿಸಲು ರಾಜ್ಯವು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದೆ. ರಾಜ್ಯವು ಸಂಪೂರ್ಣ ಲಸಿಕೆಯತ್ತ ಸಾಗುತ್ತಿದೆ. ಎರಡು ಡೋಸ್ ಲಸಿಕೆ ಪಡೆದವರಲ್ಲಿ ಕೇವಲ 10 ಪ್ರತಿಶತದಷ್ಟು ಜನರಿಗೆ ಮಾತ್ರ ಕೊರೋನಾ ಇರುವುದು ದೃಢಪಟ್ಟಿದೆ ಎಂದು ಸಚಿವರು ಹೇಳಿದರು.

                      18 ವರ್ಷಕ್ಕಿಂತ ಮೇಲ್ಪಟ್ಟ 80 ಪ್ರತಿಶತ ಜನರಿಗೆ ಲಸಿಕೆ ಹಾಕಲಾಗಿದೆ. ಕೇಂದ್ರವು ಇನ್ನೂ 13 ಲಕ್ಷ ಲಸಿಕೆಗಳನ್ನು ನೀಡಲಿದೆ  ಎಂದು ಅವರು ಹೇಳಿದರು. ಮೂರನೇ ತರಂಗಕ್ಕೆ ಮುಂಚಿತವಾಗಿ ಜಿಲ್ಲೆಯ ಎಲ್ಲಾ ಪ್ರಮುಖ ಆಸ್ಪತ್ರೆಗಳಲ್ಲಿ ಮಕ್ಕಳ ಐಸಿಯುಗಳನ್ನು ಸ್ಥಾಪಿಸಲಾಗಿದೆ ಎಂದು ವೀಣಾ ಜಾರ್ಜ್ ಹೇಳಿದರು. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries