HEALTH TIPS

ಸಹಕಾರಿ ವಲಯದ ಭ್ರಷ್ಟಾಚಾರದ ಬಗ್ಗೆ ನಿಷ್ಪಕ್ಷಪಾತ ತನಿಖೆ ಅಗತ್ಯ-ಸಹಕಾರ ಭಾರತಿ

 

                 ಕಾಸರಗೋಡು: ರಾಜಕೀಯ ಹಸ್ತಕ್ಷೇಪದಿಂದ ಕೇರಳದ ಸಹಕಾರಿ ಕ್ಷೇತ್ರ ಮತ್ತು ಸಹಕಾರಿ ಸಂಸ್ಥೆಗಳ ವಿಶ್ವಾಸಾರ್ಹತೆಗೆ ಧಕ್ಕೆಯುಂಟಾಗಿದೆ ಎಂದು ಸಹಕಾರ ಭಾರತಿ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ವಕೀಲ ಕರುಣಾಕರ ನಂಬ್ಯಾರ್ ತಿಳಿಸಿದ್ದಾರೆ.

               ಅವರು ಕಾಸರಗೋಡು ಟೌನ್‍ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಹಕಾರ ಭಾರತಿ ಕಾಸರಗೋಡು ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಆರ್ಥಿಕ ಅವ್ಯವಹಾರ, ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಹಕಾರಿ ಸಂಸ್ಥೆಗಳ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಲು ಸರ್ಕಾರ ಮುಂದಾಗಬೇಕು ಎಂದು ತಿಳಿಸಿದರು. ಸಹಕಾರ ಭಾರತಿ ಜಿಲ್ಲಾಧ್ಯಕ್ಷ ಗಣಪತಿ ಕೋಟೆಕಣಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಗಣೇಶ್ ಪಾರೆಕಟ್ಟ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಸಹಕಾರ ಭಾರತಿ ಕೇರಳ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಧಾಕೃಷ್ಣನ್ ಪಾಲಕ್ಕಾಡ್ ಸಮಾರೋಪ ಭಾಷಣ ಮಾಡಿದರು. 

              ಈ ಸಂದರ್ಭ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗಣೇಶ್ ಪಾರೆಕಟ್ಟ ಅಧ್ಯಕ್ಷ, ವಿಘ್ನೇಶ್ವರ ಮಾಸ್ಟರ್ ಕೆದುಕೋಡಿ ಪ್ರಧಾನ ಕಾರ್ಯದರ್ಶಿ, ಶಶಿಭೂಷಣ ಶಾಸ್ತ್ರಿ ಪೆರ್ಲ ಕೋಶಾಧಿಕಾರಿ ಹಾಗೂ ಇತರ ಪದಾಧಿಕಾರಿಗಳ ಆಯ್ಕೆ ನಡೆಯಿತು.  ಸಂಘಟನೆ ಜಿಲ್ಲಾ ಜತೆಕಾರ್ಯದರ್ಶಿ ವೇಣುಗೋಪಾಲ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಶಂಕರನಾರಾಯಣ ಕಿದೂರು ವಂದಿಸಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries