HEALTH TIPS

ಗಡಿದಾಟಲು RTPCR ವಿರುದ್ಧದ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್!


          ಕೊಚ್ಚಿ: ಕರ್ನಾಟಕ ಗಡಿಯಲ್ಲಿ ಆರ್‌ಟಿಪಿಸಿಆರ್ ಕೈಗೊಂಡ ಕ್ರಮದ ವಿರುದ್ಧ ಸಲ್ಲಿಸಲಾದ ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ.  ಈ ಪ್ರಕರಣವು ಕೇರಳ ಹೈಕೋರ್ಟ್‌ನ ವ್ಯಾಪ್ತಿಯಲ್ಲಿಲ್ಲ ಎಂದು ಪರಿಗಣಿಸಿ ಅರ್ಜಿಗಳನ್ನು ವಜಾಗೊಳಿಸಲಾಯಿತು.
       ಮುಖ್ಯ ನ್ಯಾಯಾಧೀಶ  ಮಣಿಕುಮಾರ್, ನ್ಯಾಯಮೂರ್ತಿ ಶಾಜಿ ಪಿ.ಚಾಲಿ ಎಂಬವರನ್ನೊಳಗೊಂಡ ವಿಭಾಗೀಯ ಪೀಠ ತಿರಸ್ಕರಿಸಿದೆ.  ಕರ್ನಾಟಕ ಗಡಿಯಲ್ಲಿ ಕೇರಳದಿಂದ ಬರುವ ಪ್ರಯಾಣಿಕರಿಗೆ   RTPCR ಋಣಾತ್ಮಕ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸಿತ್ತು.  ಆದಾಗ್ಯೂ, ಲಸಿಕೆ ಪ್ರಮಾಣಪತ್ರ ಹೊಂದಿರುವ ಪ್ರಯಾಣಿಕರನ್ನು ಆರ್‌ಟಿಪಿಸಿಆರ್ ಇಲ್ಲದೆ ಗಡೀ ದಾಟಲು ಅವಕಾಶ ನೀಡಬೇಕೆಂದು ಕೇರಳ ಮನವಿ ಮಾಡಿತ್ತು.  ಇದಕ್ಕಾಗಿ ಸಲ್ಲಿಕೆಯಾದ ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ.
         ಕೇರಳ ಹಾಗೂ ಮಹಾರಾಷ್ಟ್ರದಿಂದ ಗಡಿ ದಾಟುವವರಿಗೆ ಕರ್ನಾಟಕ ಆರ್‌ಟಿಪಿಸಿಆರ್ ನ್ನು ಕಡ್ಡಾಯಗೊಳಿಸಿದೆ.  ಪ್ರಯಾಣಿಕರು 72 ಗಂಟೆಗಳ ಒಳಗೆ ತೆಗೆದುಕೊಂಡ ಋಣಾತ್ಮಕ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries