ತಿರುವನಂತಪುರಂ: ರಾಜ್ಯದಲ್ಲಿ ಇಂದು 12,288 ಮಂದಿ ಜನರಿಗೆ ಕೋವಿಡ್ ದೃಢಪಟ್ಟಿದೆ. ಎರ್ನಾಕುಳಂ 1839, ತ್ರಿಶೂರ್ 1698, ತಿರುವನಂತಪುರಂ 1435, ಕೋಝಿಕ್ಕೋಡ್ 1033, ಕೊಲ್ಲಂ 854, ಮಲಪ್ಪುರಂ 762, ಅಲಪ್ಪುಳ 746, ಕೊಟ್ಟಾಯಂ 735, ಪಾಲಕ್ಕಾಡ್ 723, ಕಣ್ಣೂರು 679, ಪತ್ತನಂತಿಟ್ಟ 643, ಇಡುಕ್ಕಿ 622, ವಯನಾಡ್ 337 ಮತ್ತು ಕಾಸರಗೋಡು 182 ಎಂಬಂತೆ ವರದಿಯಾಗಿದೆ.
ಕಳೆದ 24 ಗಂಟೆಗಳಲ್ಲಿ 99,312 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕು ಜನಸಂಖ್ಯೆ ಅನುಪಾತವು (WIPR) 10 ಕ್ಕಿಂತ ಹೆಚ್ಚಿನ 227 ಸ್ಥಳೀಯ ಸಂಸ್ಥೆಗಳಲ್ಲಿ 332 ವಾರ್ಡ್ಗಳಿವೆ. ಇಲ್ಲಿ ಕಠಿಣ ನಿಯಂತ್ರಣ ಇರುತ್ತದೆ.
ಪ್ರಸ್ತುತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 3,77,128 ಮಂದಿ ಜನರು ಕಣ್ಗಾವಲಿನಲ್ಲಿ ಇದ್ದಾರೆ. ಈ ಪೈಕಿ 3,62,444 ಮಂದಿ ಮನೆ / ಸಾಂಸ್ಥಿಕ ಕ್ವಾರಂಟೈನ್ ಮತ್ತು 14,684 ಮಂದಿ ಆಸ್ಪತ್ರೆ ಮೇಲ್ವಿಚಾರಣೆಯಲ್ಲಿದ್ದಾರೆ. ಒಟ್ಟು 1,016 ಮಂದಿ ಜನರನ್ನು ಹೊಸದಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಪ್ರಸ್ತುತ, 1,18,744 ಕೋವಿಡ್ ಪ್ರಕರಣಗಳಲ್ಲಿ, ಶೇಕಡಾ 10.7 ರಷ್ಟು ಜನರು ಮಾತ್ರ ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 141 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 25,952 ಕ್ಕೆ ಏರಿಕೆಯಾಗಿದೆ.
ಇಂದು, ಸೋಂಕು ಪತ್ತೆಯಾದವರಲ್ಲಿ 51 ಮಂದಿ ರಾಜ್ಯದ ಹೊರಗಿಂದ ಬಂದವರು. 11,674 ಮಂದಿ ಜನರು ಸಂಪರ್ಕದ ಮೂಲಕ ಸೋಂಕಿಗೆ ಒಳಗಾಗಿದ್ದಾರೆ. 494 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು 69 ಮಂದಿವಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ದೃಢಪಟ್ಟಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ ಒಟ್ಟು 15,808 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 2217, ಕೊಲ್ಲಂ 1374, ಪತ್ತನಂತಿಟ್ಟ 661, ಅಲಪ್ಪುಳ 791, ಕೊಟ್ಟಾಯಂ 1011, ಇಡುಕ್ಕಿ 444, ಎರ್ನಾಕುಳಂ 3280, ತ್ರಿಶೂರ್ 1846, ಪಾಲಕ್ಕಾಡ್ 732, ಮಲಪ್ಪುರಂ 1169, ಕೋಝಿಕ್ಕೋಡ್ 1165, ವಯನಾಡ್ 484, ಕಣ್ಣೂರು 398 ಮತ್ತು ಕಾಸರಗೋಡು 236 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ, 1,18,744 ಮಂದಿ ಜನರಿಗೆ ಸೋಂಕು ಇರುವುದು ಪತ್ತೆಯಾಗಿದ್ದು, ಅವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. 46,18,408 ಮಂದಿ ಇಲ್ಲಿಯವರೆಗೆ ಕೋವಿಡ್ನಿಂದ ಮುಕ್ತರಾಗಿದ್ದಾರೆ.




