ತಿರುವನಂತಪುರಂ: ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಭಾರೀ ಮಳೆ,ಭೂಕುಸಿತದಿಂದ ಒಟ್ಟು 39 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಕ್ಟೋಬರ್ 12 ಮತ್ತು 19 ರ ನಡುವೆ 39 ಜನರು ಸಾವನ್ನಪ್ಪಿದ್ದಾರೆ. ಕಂದಾಯ ಸಚಿವ ಕೆ. ರಾಜನ್ ಈ ಬಗ್ಗೆ ಮಾಹಿತಿ ನೀಡಿದರು.
ಈ ಮಧ್ಯೆ ದುರಂತದಲ್ಲಿ ನಾಪತ್ತೆಯಾದ ಐದು ಮಂದಿ ಜನರ ವಿವರಗಳು ಇನ್ನೂ ಲಭ್ಯವಾಗಿಲ್ಲ ಎಂದು ಸಚಿವರು ಹೇಳಿದರು. ಅವರಿಗಾಗಿ ಶೋಧ ಮುಂದುವರಿದಿದೆ. ವಿಶೇಷ ಪರಿಸ್ಥಿತಿಯ ದೃಷ್ಟಿಯಿಂದ ರಾಜ್ಯದಲ್ಲಿ 12 ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ರೆಡ್ ಅಲರ್ಟ್ನಂತೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಕಲೆಕ್ಟರ್ಗಳಿಗೆ ಸೂಚಿಸಿದರು.