ತಿರುವನಂತಪುರಂ: ರಾಜ್ಯದಲ್ಲಿ ಇಂದು 6996 ಮಂದಿ ಜನರಿಗೆ ಕೋವಿಡ್ ದೃಢಪಟ್ಟಿದೆ. ಎರ್ನಾಕುಳಂ 1058, ತಿರುವನಂತಪುರ 1010, ಕೋಝಿಕ್ಕೋಡ್ 749, ತ್ರಿಶೂರ್ 639, ಮಲಪ್ಪುರಂ 550, ಕೊಟ್ಟಾಯಂ 466, ಕೊಲ್ಲಂ 433, ಇಡುಕ್ಕಿ 430, ಪಾಲಕ್ಕಾಡ್ 426, ಕಣ್ಣೂರು 424, ಆಲಪ್ಪುಳ 336, ಪತ್ತನಂತಿಟ್ಟ 179, ಕಾಸರಗೋಡು 166 ಮತ್ತು ವಯನಾಡ್ 130 ಎಂಬಂತೆ ಸೋಂಕು ಬಾಧಿಸಿದೆ.
ಕಳೆದ 24 ಗಂಟೆಗಳಲ್ಲಿ 66,702 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕು ಜನಸಂಖ್ಯೆ ಅನುಪಾತ (WIPR) 10 ಕ್ಕಿಂತ ಹೆಚ್ಚಿನ 227 ಸ್ಥಳೀಯ ಸಂಸ್ಥೆಗಳಲ್ಲಿ 332 ವಾರ್ಡ್ಗಳಿವೆ. ಇಲ್ಲಿ ಕಠಿಣ ನಿಯಂತ್ರಣ ಇರುತ್ತದೆ.
ಪ್ರಸ್ತುತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 3,54,720 ಮಂದಿ ಜನರು ಕಣ್ಗಾವಲಿನಲ್ಲಿ ಇದ್ದಾರೆ. ಈ ಪೈಕಿ 3,42,367 ಮಂದಿ ಮನೆ / ಸಾಂಸ್ಥಿಕ ಕ್ವಾರಂಟೈನ್ ಮತ್ತು 12,353 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಒಟ್ಟು 677 ಮಂದಿ ಜನರನ್ನು ಹೊಸದಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಸ್ತುತ, 1,01,419 ಕೋವಿಡ್ ಪ್ರಕರಣಗಳಲ್ಲಿ, ಶೇಕಡಾ 10.8 ರಷ್ಟು ಜನರು ಮಾತ್ರ ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 84 ಮಂದಿ ಕೋವಿಡ್ಸಾ ನಿಂದ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 26,342 ಕ್ಕೆ ಏರಿಕೆಯಾಗಿದೆ.
ಇಂದು, ಸೋಂಕು ಗುರುತಿಸಿದವರಲ್ಲಿ 40 ಜನರು ಹೊರ ರಾಜ್ಯದವರು. ಸಂಪರ್ಕದ ಮೂಲಕ 6588 ಮಂದಿ ಜನರು ಸೋಂಕಿಗೆ ಒಳಗಾಗಿದ್ದಾರೆ. 333 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಮೂವತ್ತೈದು ಆರೋಗ್ಯ ಕಾರ್ಯಕರ್ತರಿಗೂ ಕೋವಿಡ್ ಬಾಧಿಸಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ ಒಟ್ಟು 16,576 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರಂ 1403, ಕೊಲ್ಲಂ 2376, ಪತ್ತನಂತಿಟ್ಟ 332, ಆಲಪ್ಪುಳ 623, ಕೊಟ್ಟಾಯಂ 990, ಇಡುಕ್ಕಿ 651, ಎರ್ನಾಕುಲಂ 3825, ತ್ರಿಶೂರ್ 1229, ಪಾಲಕ್ಕಾಡ್ 978, ಮಲಪ್ಪುರಂ 926, ಕೋಯಿಕ್ಕೋಡ್ 1918, ವಯನಾಡ್ 539, ಕಣ್ಣೂರು 708 ಮತ್ತು ಕಾಸರಗೋಡು 78 ಗುಣಮುಖವಾಗಿದೆ. ಇದರೊಂದಿಗೆ, 1,01,419 ಜನರಿಗೆ ರೋಗ ಪತ್ತೆಯಾಗಿದೆ ಮತ್ತು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. 46,73,442 ಮಂದಿ ಇಲ್ಲಿಯವರೆಗೆ ಕೋವಿಡ್ನಿಂದ ಮುಕ್ತರಾಗಿದ್ದಾರೆ.




