ತಿರುವನಂತಪುರಂ: ರಾಜ್ಯದಲ್ಲಿ ಇಂದು 8,850 ಮಂದಿ ಜನರಿಗೆ ಕೋವಿಡ್ ದೃಢಪಟ್ಟಿದೆ. ತಿರುವನಂತಪುರ 1134, ತ್ರಿಶೂರ್ 1077, ಎರ್ನಾಕುಳಂ 920, ಕೋಝಿಕ್ಕೋಡ್ 892, ಮಲಪ್ಪುರಂ 747, ಕೊಲ್ಲಂ 729, ಕಣ್ಣೂರು 611, ಕೊಟ್ಟಾಯಂ 591, ಪಾಲಕ್ಕಾಡ್ 552, ಆಲಪ್ಪುಳ 525, ಪತ್ತನಂತಿಟ್ಟ 499, ಇಡುಕ್ಕಿ 376, ವಯನಾಡ್ 105 ಮತ್ತು ಕಾಸರಗೋಡು 92 ಎಂಬಂತೆ ಇಂದು ಸೋಂಕು ಪತ್ತೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 74,871 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕು ಜನಸಂಖ್ಯೆ ಅನುಪಾತ (WIPR) 10 ಹೆಚ್ಚಿರುವ 368 ಸ್ಥಳೀಯ ಸಂಸ್ಥೆಗಳಲ್ಲಿ 745 ವಾರ್ಡ್ಗಳನ್ನು ಒಳಗೊಂಡಿದೆ. ಇಲ್ಲಿ ಕಠಿಣ ನಿಯಂತ್ರಣ ಇರುತ್ತದೆ.
ಪ್ರಸ್ತುತ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 4,15,489 ಮಂದಿ ಜನರು ಕಣ್ಗಾವಲಿನಲ್ಲಿ ಇದ್ದಾರೆ. ಇವರಲ್ಲಿ 3,99,228 ಮಂದಿ ಮನೆ / ಸಾಂಸ್ಥಿಕ ಕ್ವಾರಂಟೈನ್ ಮತ್ತು 16,261 ಮಂದಿ ಆಸ್ಪತ್ರೆ ಮೇಲ್ವಿಚಾರಣೆಯಲ್ಲಿದ್ದಾರೆ. ಒಟ್ಟು 1,019 ಮಂದಿ ಜನರನ್ನು ಹೊಸದಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಪ್ರಸ್ತುತ, 1,28,736 ಕೋವಿಡ್ ಪ್ರಕರಣಗಳಲ್ಲಿ ಕೇವಲ 11.2 ಪ್ರತಿಶತದಷ್ಟು ಜನರು ಮಾತ್ರ ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ 149 ಮಂದಿ ಮೃತರಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ ಇಂದಿಗೆ 25,526 ಕ್ಕೆ ಏರಿಕೆಯಾಗಿದೆ.
ಇಂದು, ಸೋಂಕು ಪತ್ತೆಯಾದವರಲ್ಲಿ 42 ಮಂದಿ ರಾಜ್ಯದ ಹೊರಗಿಂದ ಬಂದವರು. 8368 ಮಂದಿ ಜನರು ಸಂಪರ್ಕದ ಮೂಲಕ ಸೋಂಕಿಗೆ ಒಳಗಾಗಿದ್ದಾರೆ. 390 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು 50 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ದೃಢೀಕರಿಸಲಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 17,007 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 1731, ಕೊಲ್ಲಂ 1104, ಪತ್ತನಂತಿಟ್ಟ 847, ಆಲಪ್ಪುಳ 974, ಕೊಟ್ಟಾಯಂ 1094, ಇಡುಕ್ಕಿ 866, ಎರ್ನಾಕುಳಂ 3566, ತ್ರಿಶೂರ್ 1273, ಪಾಲಕ್ಕಾಡ್ 920, ಮಲಪ್ಪುರಂ 1360, ಕೋಝಿಕ್ಕೋಡ್ 1734, ವಯನಾಡ್ 656, ಕಣ್ಣೂರು 754 ಮತ್ತು ಕಾಸರಗೋಡು 128 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ, 1,28,736 ಮಂದಿ ಜನರು ಕೋವಿಡ್ ನಿಂದ ಬಳಲುತ್ತಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ 45,74,206 ಮಂದಿ ಜನರನ್ನು ಕೋವಿಡ್ನಿಂದ ಬಿಡುಗಡೆ ಮಾಡಲಾಗಿದೆ.




